ಕರ್ನಾಟಕ

karnataka

By

Published : Oct 14, 2019, 8:59 AM IST

ETV Bharat / state

ರಾಮಾಯಣ ಮಹಾಕಾವ್ಯ ರಚಿಸಿದ ವಾಲ್ಮೀಕಿ ಸಾಧನೆ ವಿಶ್ವಕ್ಕೆ ಮಾದರಿ: ಶಿರಿನ್ ತಾಜ್

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ವಾಲ್ಮೀಕಿ ಜಯಂತಿ ಕಾರ್ಯಕ್ರಮ

ಹಾಸನ:ಮಾನವೀಯ ಮೌಲ್ಯಗಳಿಂದ ತುಂಬಿರುವ ರಾಮಾಯಣ ಮಹಾಕಾವ್ಯವನ್ನು ರಚಿಸಿದ ವಾಲ್ಮೀಕಿ ಸಾಧನೆ ವಿಶ್ವಕ್ಕೆ ಮಾದರಿ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ ಶಿರಿನ್ ತಾಜ್ ಅಭಿಪ್ರಾಯಪಟ್ಟರು.

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

ಜಿಲ್ಲೆಯ ಆಲೂರು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ಮಹರ್ಷಿ ಒಬ್ಬ ಋುಷಿ, ಸಂಸ್ಕೃತ ಕವಿ, ರಾಮಾಯಣ ಮಹಾಕಾವ್ಯದ ಕರ್ತೃ. ಮಹಾಕಾವ್ಯದ ಮೂಲಕ ವಿಶ್ವದ ಗಮನ ಸೆಳೆದ ಮಾನವತಾವಾದಿ. ಅವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅನುಸರಿಸಿ ನೆಮ್ಮದಿಯ ಜೀವನ ನಡೆಸಬೇಕು ಎಂದು ಸಲಹೆ ಮಾಡಿದರು.

ಕಾರ್ಯಕ್ರಮಕ್ಕೂ ಮುನ್ನ ವಾಲ್ಮೀಕಿ ಮಹರ್ಷಿ ಭಾವಚಿತ್ರವನ್ನು ಆಲೂರು ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮಾಡುವ ಮೂಲಕ ತಾಲೂಕು ಕಚೇರಿಯ ಆವರಣದ ವೇದಿಕೆಗೆ ತರಲಾಯಿತು. ಇದೇ ವೇಳೆ ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಇನ್ನು ಜಿಲ್ಲಾ ಎಪಿಎಂಸಿ ಅಧ್ಯಕ್ಷ ಕೆ.ಎಸ್.ಮಂಜೇಗೌಡ ಮಾತನಾಡಿ, ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯ ಹಾಗೂ ಮಹಾಕಾವ್ಯದಲ್ಲಿನ ಎಲ್ಲ ಪಾತ್ರಗಳು ಆಧ್ಯಾತ್ಮಿಕ, ಸಾಮಾಜಿಕ ನ್ಯಾಯ, ಮಾನವೀಯತೆ ಮತ್ತು ವಿಶ್ವ ಭ್ರಾತೃತ್ವದ ಪ್ರತೀಕವಾಗಿದ್ದು, ಭಾರತೀಯ ಸಮಾಜದ ಮೇಲೆ ಬಹಳಷ್ಟು ಪ್ರಭಾವ ಬೀರಿವೆ ಎಂದರು.

For All Latest Updates

TAGGED:

ABOUT THE AUTHOR

...view details