ಕರ್ನಾಟಕ

karnataka

ETV Bharat / state

ಜೀವನದಲ್ಲಿ ಜಿಗುಪ್ಸೆ: ಪತ್ನಿಗೆ ಕರೆ ಮಾಡಿ ನೇಣಿಗೆ ಶರಣಾದ ವ್ಯಕ್ತಿ

ಪತ್ನಿಗೆ ಕರೆ ಮಾಡಿ ನನ್ನಿಂದ ಜೀವನ ನಡೆಸಲು ಸಾಧ್ಯವಿಲ್ಲ ನನ್ನನ್ನು ಕ್ಷಮಿಸಿಬಿಡು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

By

Published : Jun 22, 2019, 5:31 AM IST

ಜೀವನದಲ್ಲಿ ಜಿಗುಪ್ಸೆ ಹೊಂದಿ ವ್ಯಕ್ತಿ ನೇಣಿಗೆ ಶರಣು

ಹಾಸನ:ಜೀವನದಲ್ಲಿ ಜಿಗುಪ್ಸೆ ಹೊಂದಿ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಅರೆಹಳ್ಳಿ ಗ್ರಾಮದ ಸಂತೋಷ ನಗರದ ನಿವಾಸಿ ಶಿವಾಜಿ (38), ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಕಾಫಿ ತೋಟದಲ್ಲಿ ಪತಿ-ಪತ್ನಿ ಕೆಲಸ ಮಾಡಿಕೊಂಡು ಸಂಸಾರ ನಡೆಸುತ್ತಿದ್ದರು. ಕೆಲ ತಿಂಗಳ ಹಿಂದೆ ಸಂಸಾರದಲ್ಲಿ ಉಲ್ಬಣಿಸಿದ ಕೆಲವು ಸಮಸ್ಯೆಗಳಿಂದ ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದರು ಎನ್ನಲಾಗಿದೆ.

ಶಿವಾಜಿ ಪತ್ನಿ ಕೆಲಸಕ್ಕೆ ಹೋದ ಬಳಿಕ ಆಕೆಗೆ ಕರೆ ಮಾಡಿ ನನ್ನಿಂದ ಜೀವನ ನಡೆಸಲು ಸಾಧ್ಯವಿಲ್ಲ ನನ್ನನ್ನು ಕ್ಷಮಿಸಿಬಿಡು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿ ಕರೆಯನ್ನು ಕಟ್ ಮಾಡಿದ್ದಾನೆ.

ಇದರಿಂದ ವಿಚಲಿತಗೊಂಡ ಪತ್ನಿ ಲತಾ ಕಾಫಿ ತೋಟದಿಂದ ಗಾಬರಿಗೊಂಡು ವಾಪಸ್ ಮನೆಗೆ ಬಂದಿದ್ದಾಳೆ. ಆದರೆ ಅಷ್ಟರೊಳಗೆ ಪತಿ ಶಿವಾಜಿ ಮನೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೇಲೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹರಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details