ಹಾಸನ: ಬೆಂಗಳೂರಿನಲ್ಲಿ ಸಚಿವ ಗೋವಿಂದ ಕಾರಜೋಳ ಅವರು ಬುಧವಾರ ಏರ್ಪಡಿಸಿದ್ದ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ, ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದಲೇ ಕೈಗೊಳ್ಳಲು ನಿರ್ಧಾರಿಸಿದ್ದಾರೆ.
ಕಾಮಗಾರಿ ಹೊಣೆ ಹೊತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ಗಳ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಹರಿಹಾಯ್ದರು. ಕೆಲಸ ಪ್ರಾರಂಭವಾಗಿ ಹಲವು ವರ್ಷಗಳೇ ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ಸಕಲೇಶಪುರ ತಾಲೂಕಿನ ಹೋರಾಟಗಾರರು ಹಗಲು ರಾತ್ರಿ ಪ್ರತಿಭಟನೆ ಮಾಡಬೇಕಾಯಿತು. ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯೇ ಹೀಗಾದರೆ ಬೇರೆ ರಸ್ತೆ ಕಾಮಗಾರಿಗಳ ಗತಿಯೇನು ಎಂದು ಪ್ರಶ್ನಿಸಿದರು.