ಕರ್ನಾಟಕ

karnataka

ETV Bharat / state

ಅರಣ್ಯ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ; ನ್ಯಾ. ಶಿವಣ್ಣ - Trafficking in trees

ಹಾನನದಲ್ಲಿ ಇಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಆಚರಿಸಲಾಯಿತು. ಇದೇ ವೇಳೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶಿವಣ್ಣ ಅರಣ್ಯ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು.

National Forest Martyrs' Day In Hassan
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ

By

Published : Sep 11, 2020, 8:03 PM IST

ಹಾಸನ : ಅರಣ್ಯ ದೇಶದ ಸಂಪತ್ತು, ಅದನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶಿವಣ್ಣ ತಿಳಿಸಿದ್ದಾರೆ.

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ನಗರದ ಅರಣ್ಯ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅರಣ್ಯ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ದೇಶದಲ್ಲಿ ಅರಣ್ಯ ಸಂಪತ್ತು ಇರುವುದರಿಂದ ಕಾಲಕಾಲಕ್ಕೆ ಮಳೆ ಬೆಳೆಯಾಗುತ್ತಿದೆ. ಜನರು ಸುಖ ಸಮೃದ್ಧಿಯಿಂದ ಜೀವನ ನಡೆಸುತ್ತಿದ್ದಾರೆ. ಹಾಗಾಗಿ ಅರಣ್ಯವನ್ನು ಇನ್ನಷ್ಟು ಮುತುವರ್ಜಿಯಿಂದ ಕಾಪಾಡಿಕೊಳ್ಳಬೇಕು ಎಂದರು.

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ

ಮರಗಳ ಕಳ್ಳ ಸಾಗಾಣಿಕೆ ಮಾಡುವವರ ವಿರುದ್ಧ, ವನ್ಯಜೀವಿ ಬೇಟೆಯಾಡುವವ ವಿರುದ್ಧ ಅರಣ್ಯ ಸಿಬ್ಬಂದಿ ಪ್ರಾಣದ ಹಂಗು ತೊರೆದು ಹೋರಾಡುತ್ತಿದ್ದಾರೆ. ಅಂತಹ ಸಂದರ್ಭದಲ್ಲಿ ಹುತಾತ್ಮರಾದ ಎಲ್ಲರ ಸಾಧನೆ ಚಿರಸ್ಮರಣೀಯ ಎಂದು ಹೇಳಿದರು.

ಜಿಲ್ಲಾಧಿಕಾರಿ ಆರ್. ಗಿರೀಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ. ಶಂಕರ್, ಉಪ ಅರಣ್ಯಾಧಿಕಾರಿ ಸಿವರಾಂ ಬಾಬು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

ABOUT THE AUTHOR

...view details