ಕರ್ನಾಟಕ

karnataka

ಬೈಕ್​​​ಗೆ ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

By

Published : Jun 24, 2020, 10:08 AM IST

ಬೈಕ್​​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಚನ್ನಪಟ್ಟಣದ ಹೊರವಲಯದಲ್ಲಿ ನಡೆದಿದೆ.

one died in byke-lorry accident
ಬೈಕ್​ ಸವಾರ ಸ್ಥಳದಲ್ಲೇ ಸಾವು

ಹಾಸನ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ.

ಬೈಕ್​ ಸವಾರ ಸ್ಥಳದಲ್ಲೇ ಸಾವು
ನಗರದ ಹೊರವಲಯದ ಚನ್ನಪಟ್ಟಣ ಬಳಿಯಿರುವ ಪಶು ಆಹಾರ ಘಟಕದ ಸಮೀಪ ಅತಿ ವೇಗವಾಗಿ ಬಂದ ಲಾರಿ ಎದುರಿನಿಂದ ಬಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶಶಿಧರ (38) ಮೃತಪಟ್ಟ ದ್ವಿಚಕ್ರ ವಾಹನ ಸವಾರ.
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಸಿಂಗಾಪುರ ಗ್ರಾಮದ ನಿವಾಸಿ ಎಂದು ತಿಳಿದುಬಂದಿದ್ದು, ಕರ್ತವ್ಯ ನಿಮಿತ್ತ ಹಾಸನಕ್ಕೆ ಬಂದು ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ ಹಾಸನ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಘಟನೆ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details