ಕರ್ನಾಟಕ

karnataka

ETV Bharat / state

ಕರ್ನಾಟಕ ಬಂದ್​​: ಹಾಸನದಲ್ಲಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು - Karnataka Band in Hassan

ಹಾಸನ ನಗರದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

Police detain protesters in Hassan
ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

By

Published : Sep 28, 2020, 3:38 PM IST

ಹಾಸನ: ಕೇಂದ್ರ, ರಾಜ್ಯ ಸರ್ಕಾರಗಳ ಕೃಷಿ ಸಂಬಂಧಿತ ಮಸೂದೆಗಳ ವಿರುದ್ಧ ನಗರದಲ್ಲಿ ಪ್ರತಿಭಟನೆಗೆ ಮುಂದಾದ ವಿಧಾನಪರಿಷತ್ ಸದಸ್ಯ ಎಂ. ಎ. ಗೋಪಾಲಸ್ವಾಮಿ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ನಗರದ ಹೇಮಾವತಿ ಪ್ರತಿಮೆ ಬಳಿ ಹಲವು ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರು. ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಗೋಪಾಲಸ್ವಾಮಿ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಬೈಕ್ ರ‍್ಯಾಲಿ ನಡೆಸಿ, ಬಲವಂತವಾಗಿ ಅಂಗಡಿ - ಮುಂಗಟ್ಟುಗಳನ್ನು ಬಂದ್ ಮಾಡಲು ಮುಂದಾದರು. ಈ ವೇಳೆ ಎಂಎಲ್​ಸಿ ಗೋಪಾಲಸ್ವಾಮಿ, ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಪ್ರಧಾನ ಕಾರ್ಯದರ್ಶಿ ನವೀನ್, ರೈತ ಮುಖಂಡ ಕೊಟ್ಟೂರು ಶ್ರೀನಿವಾಸ್ ಸೇರಿದಂತೆ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

ಈ ವೇಳೆ, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಸ್ಥಳದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಬಳಿಕ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು.

ABOUT THE AUTHOR

...view details