ಕರ್ನಾಟಕ

karnataka

ETV Bharat / state

ಹಾಸನ, ಚಿಕ್ಕಮಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ - ಹಾಸನದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ, ಸಿಎಎ, ಎನ್‌ಆರ್‌ಸಿ ವಿರೋಧಿಸಿ ಕರೆ ನೀಡಿರುವ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರದ ಹಿನ್ನೆಲೆ ವಿವಿಧ ಸಂಘಟನೆಗಳಿಂದ ಹಾಸನದಲ್ಲಿ ಪ್ರತಿಭಟನೆ ನಡೆಸಲಾಯಿತು.

ವಿವಿಧ ಸಂಘಟನೆಗಳಿಂದ ಪ್ರತಿಭಟನೆ, Protest by various organizations
ವಿವಿಧ ಸಂಘಟನೆಗಳಿಂದ ಪ್ರತಿಭಟನೆ

By

Published : Jan 8, 2020, 6:54 PM IST

ಹಾಸನ/ಚಿಕ್ಕಮಗಳೂರು :ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ, ಸಿಎಎ, ಎನ್‌ಆರ್‌ಸಿ ವಿರೋಧಿಸಿ ಕರೆ ನೀಡಿರುವ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರದ ಹಿನ್ನೆಲೆ ವಿವಿಧ ಸಂಘಟನೆಗಳಿಂದ ಹಾಸನದಲ್ಲಿ ಪ್ರತಿಭಟನೆ ನಡೆಸಲಾಯಿತು.

ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಕೆಎಸ್​ಆರ್​ಟಿಸಿ ಬಸ್, ಆಟೋ, ಕಾರು, ಟೆಂಪೊ ಸಂಚಾರ ಎಂದಿನಂತಿತ್ತು. ಅಂಗಡಿಗಳು, ಚಲನಚಿತ್ರ ಮಂದಿರಗಳು, ಪೆಟ್ರೋಲ್ ಬಂಕ್ ಇತರೆ ವಹಿವಾಟುಗಳು ಅಡೆತಡೆಯಿಲ್ಲದೆ ನಡೆಯಿತು. ಹಾಸನ ನಗರ ಬಸ್ ನಿಲ್ದಾಣ ರಸ್ತೆ ಬಳಿ ಇರುವ ಕೆಲ ಅಂಗಡಿಗಳು ಮುಚ್ಚಿರುವುದು ಬಿಟ್ಟರೆ ಉಳಿದಂತೆ ಭಾರತ್​ ಬಂದ್​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದೇಶವ್ಯಾಪಿ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಜಿಲ್ಲೆಯ ಸಿಪಿಐ(ಎಂ), ಸಿಪಿಐ, ದಲಿತ, ರೈತ, ಕಾರ್ಮಿಕರ, ವಿದ್ಯಾರ್ಥಿ, ಯುವಜನ, ಮಹಿಳಾ, ಮುಸ್ಲಿಂ, ಅಲ್ಪಸಂಖ್ಯಾತ ಹಾಗೂ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘ ಮತ್ತಿತರೆ ಜಾತ್ಯಾತೀತ ಪ್ರಜಾಸತ್ತಾತ್ಮಕ ಸಂಘಟನೆಗಳು ಒಟ್ಟಾಗಿ ನಗರದ ಹೇಮಾವತಿ ಪ್ರತಿಮೆ ಬಳಿ ಸೇರಿ ಕೆಲ ಸಮಯ ಪ್ರತಿಭಟನೆ ನಡೆಸಿದರು. ಮುನ್ನೆಚ್ಚರಿಕ ಕ್ರಮವಾಗಿ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು.

ಚಿಕ್ಕಮಗಳೂರಿನಲ್ಲಿ 3,000 ಕ್ಕೂ ಅಧಿಕ ಕಾರ್ಯಕರ್ತರಿಂದ ಬೃಹತ್​ ಪ್ರತಿಭಟನೆ :

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಇಂದು ಕರೆ ನೀಡಿದ್ದ ಭಾರತ್ ಬಂದ್​ಗೆ ಚಿಕ್ಕಮಗಳೂರಿನಲ್ಲಿ ಹಲವಾರು ಸಂಘಟನೆಗಳು ಬೆಂಬಲ ನೀಡಿದವು. ವಿವಿಧ ಸಂಘಟನೆಯ 3,000 ಕ್ಕೂ ಅಧಿಕ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಕೆಇಬಿ ವೃತ್ತದಿಂದ ಆರಂಭವಾದ ಪ್ರತಿಭಟನೆ ಎಂ.ಜಿ. ರಸ್ತೆಯ ಮೂಲಕ ಸಾಗಿ ಆಜಾದ್ ಪಾರ್ಕ್ ವೃತ್ತದಲ್ಲಿ ಕೊನೆಯಾಯಿತು. ಪ್ರತಿಭಟನೆ ಮಾಡುತ್ತಿದ್ದ ಎಲ್ಲಾ ಪ್ರತಿಭಟನಾಕಾರರು ರಸ್ತೆಯುದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ABOUT THE AUTHOR

...view details