ಕರ್ನಾಟಕ

karnataka

ETV Bharat / state

ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಿ: ವಿಧಾನಪರಿಷತ್ ಸದಸ್ಯ ಆಗ್ರಹ - Flood Relief

ಪ್ರವಾಹ ಸಂತ್ರಸ್ತರಿಗೆ ಕೇವಲ ತಾತ್ಕಾಲಿ ಪರಿಹಾರ ಕೊಡುವುದನ್ನು ಬಿಟ್ಟು, ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಗೋಪಾಲಸ್ವಾಮಿ ಆಗ್ರಹಿಸಿದರು.

ಪ್ರವಾಹ ಸಂತ್ರಸ್ತರಿಗೆ ಶಾಸ್ವತ ಪರಿಹಾರ ಕಲ್ಪಿಸಿ: ವಿಧಾನಪರಿಷತ್ ಸದಸ್ಯ ಗೋಪಾಲಸ್ವಾಮಿ ಆಗ್ರಹ

By

Published : Aug 25, 2019, 5:41 PM IST

ಹಾಸನ :ಜಿಲ್ಲೆಯಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಅನಾವೃಷ್ಟಿಗೆ ಕೇಂದ್ರ ಸರ್ಕಾರ 500 ಕೋಟಿ ರೂ. ಬಿಡುಗಡೆ ಮಾಡುವಂತೆ ವಿಧಾನಪರಿಷತ್ ಸದಸ್ಯ ಗೋಪಾಲಸ್ವಾಮಿ ಆಗ್ರಹಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿ, ಪ್ರವಾಹ ಸಂತ್ರಸ್ತರಿಗೆ ಕೇವಲ ತಾತ್ಕಾಲಿಕ ಪರಿಹಾರ ಕೊಡುವುದೇ ಮುಖ್ಯವಾಗಬಾರದು. ಅವರಿಗೆ ಶಾಶ್ವತ ಪರಿಹಾರ ಕಲ್ಪಿಸಿಕೊಡಬೇಕು. ಈಗಾಗಲೇ ಜಿಲ್ಲೆಯಲ್ಲಿ ಸಾಕಷ್ಟು ಬೆಳೆಹಾನಿಯಾಗಿದ್ದು, ಆಸ್ತಿಪಾಸ್ತಿಗಳು ನಷ್ಟವಾಗಿವೆ. ಸರ್ಕಾರ ಹೆಸರಿಗೆ ಮಾತ್ರ 2000 ರೂ. ಪರಿಹಾರ ಕೊಟ್ಟರೆ ಅನುಕೂಲವಾಗುವುದಿಲ್ಲ. ಬೆಳೆ ನಷ್ಟಕ್ಕೆ ಅನುಗುಣವಾಗಿ ಪರಿಹಾರ ಕೊಡುವ ನಿಟ್ಟಿನಲ್ಲಿ ಚಿಂತಿಸಬೇಕು. ಜಿಲ್ಲಾಧಿಕಾರಿ ಸೇರಿದಂತೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಶಕ್ತಿಮೀರಿ ಕೆಲಸ ಮಾಡಿ ಸಂತ್ರಸ್ತರಿಗೆ ಸ್ಪಂದಿಸಿರುವುದು ಶ್ಲಾಘನೀಯ ಎಂದರು.

ಸಚಿವ ಸಂಪುಟ ವಿಸ್ತರಣೆಯಾಗಿ ಖಾತೆ ಹಂಚಿಕೆಯಾಗುವ ಮೊದಲೇ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದ ಸಚಿವರನ್ನು ಜಿಲ್ಲೆಗೆ ಕಳುಹಿಸಿ ಪ್ರವಾಹ ಹಾನಿ ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ. ಆದ್ದರಿಂದ ಹಾನಿಗೊಳಗಾದ ಪ್ರದೇಶದ ಜನರಿಗೆ ಆದಷ್ಟುಬೇಗ ಪರಿಹಾರ ನೀಡಿದರೆ ಅನುಕೂಲವಾಗಲಿದೆ. ಜಿಲ್ಲೆಯ ಸಕಲೇಶಪುರ, ಬೇಲೂರು, ಅರಕಲಗೂಡು ತಾಲೂಕುಗಳಲ್ಲಿ ಅತಿ ಹೆಚ್ಚು ಹಾನಿಯಾಗಿದೆ. ಕಾಂಗ್ರೆಸ್ ಪಕ್ಷದಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ಪರಿಹಾರ ನೀಡಲು ಮುಂದಾಗಿದೆ ಎಂದರು.

ಪ್ರವಾಹ ಸಂತ್ರಸ್ತರಿಗೆ ಶಾಸ್ವತ ಪರಿಹಾರ ಕಲ್ಪಿಸಿ: ವಿಧಾನಪರಿಷತ್ ಸದಸ್ಯ ಗೋಪಾಲಸ್ವಾಮಿ ಆಗ್ರಹ

ಈ ವೇಳೆ ಮಾಜಿ ಶಾಸಕ ಸಿ.ಎಸ್ ಪುಟ್ಟೇಗೌಡ ಮಾತನಾಡಿ, ಮೈತ್ರಿ ರಚನೆ ಬಗ್ಗೆ ಸಿದ್ದರಾಮಯ್ಯ ಹಾಗೂ ದೇವೇಗೌಡರ ನಡುವೆ ನಡೆಯುತ್ತಿರುವ ರಾಜಕೀಯ ಗುದ್ದಾಟದಲ್ಲಿ‘ ಸಿದ್ದರಾಮಯ್ಯ ಮಾತನಾಡುವುದು ನೂರಕ್ಕೆ ನೂರು ಸರಿ ಇದೆ. ಈ ವಿಷಯದಲ್ಲಿ ದೇವೇಗೌಡರು ಪಲಾಯನವಾದ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಅಧಿಕಾರದಲ್ಲಿದ್ದಾಗ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಯಾವುದೇ ಪ್ರಯೋಜನವಾಗಿಲ್ಲ ಮತ್ತು ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿಯೂ ಆಗಿಲ್ಲ. ಆದರೆ ಜೆಡಿಎಸ್ ಕಾರ್ಯಕರ್ತರಿಗೆ ತುಂಬಾ ಅನುಕೂಲವಾಗಿದೆ ಎಂದು ದೂರಿದರು.

ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೇವಲ ಕಮಿಷನ್ ರಾಜಕೀಯ ನಡೆಯಿತೆ ಹೊರತು ಜನರಿಗೆ ಅನುಕೂಲವಾಗುವ ಯಾವುದೇ ಕೆಲಸಗಳು ನಡೆಯಲಿಲ್ಲ. ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ಪಕ್ಷದ ಒಬ್ಬ ಸಮರ್ಥ ನಾಯಕರಾಗಿದ್ದು, ಅವರು ಬದ್ಧತೆ ಪ್ರದರ್ಶಿಸುತ್ತಿದ್ದಾರೆ. ಆದರೆ ದೇವೇಗೌಡರು ಸಮಯಕ್ಕೆ ತಕ್ಕಂತೆ ರಾಜಕೀಯ ಮಾಡುವವರು. ಪ್ರಸ್ತುತ ಸಿದ್ದರಾಮಯ್ಯ ಹೇಳಿಕೆಗಳು ಸತ್ಯವಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್, ಬಾಗೂರು ಮಂಜೇಗೌಡ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಜಾವಗಲ್ ಮಂಜುನಾಥ್ ಮತ್ತಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ABOUT THE AUTHOR

...view details