ಹಾಸನ: ರೇವಣ್ಣ ಅವರಿಗೆ ಶಿಕ್ಷಣ ಅಂದರೆ ಏನು ಅಂತ ಗೊತ್ತಿಲ್ಲ. ನಾಲ್ಕು ಬಿಲ್ಡಿಂಗ್ ಕಟ್ಟೋದನ್ನೇ ಶಿಕ್ಷಣ ಅನ್ಕೊಂಡಿದ್ದಾರೆ. ಅವರಿಗೆ ಯಾವ ರೀತಿ ಕೆಲಸ ಮಾಡಬೇಕು ಮತ್ತು ಸುಧಾರಣೆ ಮಾಡಬೇಕೆಂಬ ಕಲ್ಪನೆ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಟೀಕಿಸಿದರು.
ಹಾಸನದಲ್ಲಿ ಮಾತನಾಡಿದ ಅವರು, ರೇವಣ್ಣ ಬಹಳ ದಕ್ಷ, ಪ್ರಾಮಾಣಿಕ, ಸ್ವಜನಪಕ್ಷಪಾತವಿಲ್ಲದೆ ಪಾರದರ್ಶಕವಾಗಿ ಕೆಲಸ ಮಾಡಿರುವವರು. ಅವರ ವಿಚಾರ ಏನು ಅಂತ ಅವರ ಊರಿನವರಿಗೆ, ಜೊತೆಯಲ್ಲಿರುವವರಿಗೆ ಇಡೀ ರಾಜ್ಯಕ್ಕೆ ಗೊತ್ತಿದೆ. ನನ್ನ ವಿಚಾರದಲ್ಲಿ ಮಾತನಾಡುವ ನೈತಿಕತೆ, ಬದ್ಧತೆ, ಅರ್ಹತೆ ಅವರಿಗಿಲ್ಲ. ನನ್ನ ಬಗ್ಗೆ ಹೇಳಿಕೆ ಕೊಡಲು ಅವರು ಒಳ್ಳೆಯ ಕಲ್ಪನೆ, ವಿಚಾರಗಳನ್ನು ಬೆಳೆಸಿಕೊಳ್ಳಬೇಕು ಎಂದರು.