ಕರ್ನಾಟಕ

karnataka

By

Published : Sep 10, 2019, 10:08 AM IST

ETV Bharat / state

ಸ್ವಚ್ಛ ಭಾರತ ಬೇಸಿಗೆ ಪ್ರಶಿಕ್ಷಣ ಸ್ಪರ್ಧೆ : ಎಸ್​ಡಿಎಂಗೆ ದ್ವಿತೀಯ ಸ್ಥಾನ

ಕೇಂದ್ರ ಸರ್ಕಾರ ಆಯೋಜಿಸಿದ್ದ ಸ್ವಚ್ಛ ಭಾರತ ಬೇಸಿಗೆ ಪ್ರಶಿಕ್ಷಣ 2.o ಸ್ಪರ್ಧೆಯಲ್ಲಿ ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ಎನ್​ಎಸ್​ಎಸ್​ ಘಟಕ ದ್ವಿತೀಯ ಸ್ಥಾನ ಪಡೆದಿದೆ.

ಎಸ್​ಡಿಎಂ

ಹಾಸನ:ಕೇಂದ್ರ ಸರ್ಕಾರ ಆಯೋಜಿಸಿದ್ದ ಸ್ವಚ್ಛ ಭಾರತ ಬೇಸಿಗೆ ಪ್ರಶಿಕ್ಷಣ 2.o ಸ್ಪರ್ಧೆಯಲ್ಲಿ ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ಎನ್​ಎಸ್​ಎಸ್​ ಘಟಕ ದ್ವಿತೀಯ ಸ್ಥಾನ ಪಡೆದಿರುವುದಾಗಿ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಸನ್ನ ನರಸಿಂಹರಾವ್ ತಿಳಿಸಿದರು.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಜಲಶಕ್ತಿ ಸಚಿವಾಲಯ ಆಯೋಜಿಸಿದ್ದ ಸ್ಪರ್ಧೆಯಲ್ಲಿ ನಮ್ಮ ಕಾಲೇಜಿನ 15 ವಿದ್ಯಾರ್ಥಿಗಳು ತಟ್ಟೆಕೆರೆ ಗ್ರಾ.ಪಂ. ವ್ಯಾಪ್ತಿಯ ದೇವೇಗೌಡ ನಗರದಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು ಎಂದು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ರು.

ನವದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಸಮ್ಮುಖದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ಡೀನ್ ಡಾ. ಯು. ಶೈಲಜಾ, ಎನ್ಎಸ್​ಎಸ್​ ಅಧಿಕಾರಿ ಡಾ. ಲೋಹಿತ್, ತಂಡದ ನಾಯಕರಾದ ಡಾ. ಮೇಧಾ, ಡಾ. ಎಂ. ಶರದ್ ಕುಮಾರ್ ಬಹುಮಾನ ವಿತರಿಸಿದ್ದಾಗಿ ಹೇಳಿದರು.

ABOUT THE AUTHOR

...view details