ಕರ್ನಾಟಕ

karnataka

ಟಿವಿಎಸ್‌ಗೆ ಕಾರು ಡಿಕ್ಕಿ: ಸವಾರ ಸಾವು

By

Published : Nov 9, 2019, 1:13 PM IST

ಟಿವಿಎಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಗೌಡಗೆರೆ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಟಿವಿಎಸ್‌ಗೆ ಕಾರು ಡಿಕ್ಕಿ: ಸವಾರ ಸಾವು

ಹಾಸನ: ಟಿವಿಎಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಗೌಡಗೆರೆ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಟಿವಿಎಸ್‌ಗೆ ಕಾರು ಡಿಕ್ಕಿ: ಸವಾರ ಸಾವು

ಚನ್ನರಾಯಪಟ್ಟಣ ತಾಲೂಕಿನ ನುಗ್ಗೇಹಳ್ಳಿ ಹೋಬಳಿ ಬಡಮಾಕನಹಳ್ಳಿ ಗ್ರಾಮದ ನಿವಾಸಿ ಶಾಮಣ್ಣ (50) ಮೃತ ವ್ಯಕ್ತಿ. ದುರಸ್ತಿ ಕಾಮಗಾರಿ ನಡೆಯುತ್ತಿದ್ದ ರಸ್ತೆ ಭಾಗದಿಂದ ಚನ್ನರಾಯಪಟ್ಟಣ ಕಡೆ ತಿರುವು ಪಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ವಿಷಯ ಇಳಿದು ಸ್ಥಳಕ್ಕಾಗಮಿಸಿದ ಸಿಪಿಐ ಎಚ್.ಎನ್. ಕಾಂತರಾಜ್ ಹಾಗೂ ಸಂಚಾರಿ ಠಾಣೆ ಪಿಎಸ್‌ಐ ಬಬಿತಾ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details