ಕರ್ನಾಟಕ

karnataka

By

Published : Dec 20, 2021, 6:34 AM IST

Updated : Dec 20, 2021, 8:38 PM IST

ETV Bharat / state

ಹಾಸನದಲ್ಲಿ ಭೀಕರ ಅಪಘಾತ: ಅವಳಿ ಕಂದಮ್ಮಗಳ ದೇಹ ಛಿದ್ರ ಛಿದ್ರ.. ತಾಯಿಯೂ ಸಾವು, ತಂದೆ ಸ್ಥಿತಿ ಗಂಭೀರ

Horrible accident in Hassan: ಹಾಸನದ ಹೊರವಲಯದಲ್ಲಿ ಬೈಕ್​ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅವಳಿ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿ ತಾಯಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅಪಘಾತದ ರಭಸಕ್ಕೆ ಪುಟ್ಟ ಕಂದಮ್ಮಗಳ ದೇಹಗಳು ಛಿದ್ರ ಛಿದ್ರಗೊಂಡಿವೆ.

hassan Twin children dead in accident
ಹಾಸನದಲ್ಲಿ ಭೀಕರ ಅಪಘಾತ

ಹಾಸನ:ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅವಳಿ ಮಕ್ಕಳು ಹಾಗೂ ಅವರ ತಾಯಿ ದಾರುಣವಾಗಿ ಮೃತಪಟ್ಟ ಘಟನೆ ನಗರದ ಹೊರವಲಯದಲ್ಲಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಂದಮ್ಮಗಳ ದೇಹಗಳು ಛಿದ್ರ ಛಿದ್ರಗೊಂಡಿದ್ದು, ತಂದೆ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಪ್ರಣತಿ (3) ಹಾಗೂ ಪ್ರಣವ್(3) ಮೃತಪಟ್ಟ ಅವಳಿ ಮಕ್ಕಳಾಗಿದ್ದು, ಶಿವಾನಂದ್ ಹಾಗೂ ಪತ್ನಿ ಜ್ಯೋತಿ ಗಂಭೀರವಾಗಿ ಗಾಯಗೊಂಡಿದ್ದರು. ಈ ದಂಪತಿಯು ದ್ವಿಚಕ್ರವಾಹನದಲ್ಲಿ ಹಾಸನದ ಕಡೆಗೆ ಹೊರಟಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಏಕಾಏಕಿ ಡಿಕ್ಕಿ ಹೊಡೆದಿದೆ. ಪರಿಣಾಮ ಮಕ್ಕಳು ಸ್ಥಳದಲ್ಲೇ ಅಸುನೀಗಿದ್ದಾರೆ. ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದ ಜ್ಯೋತಿ ಕೂಡ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಗಾಯಗೊಂಡ ಪೋಷಕರು

ಡಿಕ್ಕಿ ರಭಸಕ್ಕೆ ಮಕ್ಕಳ ಮೃತದೇಹಗಳು ಛಿದ್ರವಾಗಿದ್ದು, ಪ್ರಣತಿ ದೇಹ ಗುರುತೂ ಕೂಡ ಸಿಗದಂತಾಗಿದೆ. ಮಕ್ಕಳಿಬ್ಬರೂ ಸುಮಾರು ಎರಡು ಕಿಲೋಮೀಟರ್​ವರೆಗೆ ಲಾರಿ ಚಕ್ರಕ್ಕೆ ಸಿಲುಕಿಕೊಂಡೇ ತೆರಳಿದ್ದರಿಂದ ಹೀಗಾಗಿದೆ. ಅಪಘಾತವೆಸಗಿದ ಲಾರಿ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಶಿವಾನಂದ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.

ಶಿವಾನಂದ್ ಕುಟುಂಬ

ಸ್ಥಳಕ್ಕೆ ಹಾಸನ ಸಂಚಾರ ಪೊಲೀಸರು ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ. ಲಾರಿ ಚಾಲಕನು ಮದ್ಯಪಾನ ಮಾಡಿ ಅಜಾಗರೂಕತೆಯಿಂದ ಚಾಲನೆ ಮಾಡಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಲಾರಿ ವಶಪಡಿಸಿಕೊಂಡ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ:ತಂದೆ-ಮಗನನ್ನು ಬಲಿ ಪಡೆದ ಹುಟ್ಟುಹಬ್ಬ, ಶಾಲಾ ಆಡಳಿತ ಮಂಡಳಿ?

Last Updated : Dec 20, 2021, 8:38 PM IST

ABOUT THE AUTHOR

...view details