ಹಾಸನ:ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಸದಸ್ಯರು ನಗರದ ಬಿ.ಎಂ.ರಸ್ತೆ ಬಳಿಯ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ಆದೇಶ ಪ್ರತಿಯನ್ನು ದಹಿಸಿದರು.
ಕಾರ್ಮಿಕ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಕೆಲಸದ ಅವಧಿಯನ್ನು 8ರಿಂದ 10 ಗಂಟೆಗೆ ಹೆಚ್ಚಿಸಿರುವುದು ಖಂಡನೀಯ. ಬಂಡವಾಳದಾರರನ್ನು ಮಾತ್ರವೇ ಮೇಲೆತ್ತುವ ಮತ್ತು ಅವರಿಗೆ ಕಾರ್ಮಿಕರ ದುಡಿಮೆ ಲೂಟಿ ಮಾಡಲು ಅವಕಾಶ ನೀಡುವುದೇ ಇದರ ಉದ್ದೇಶವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.