ಕರ್ನಾಟಕ

karnataka

ETV Bharat / state

ವ್ಯಕ್ತಿಯ ಬರ್ಬರ ಸಾವು... ಹಲವು ಅನುಮಾನಗಳಿಗೆ ಕಾರಣವಾದ ಮೃತದೇಹ! - ಹಾವೇರಿ ಲೆಟೆಸ್ಟ್ ನ್ಯುಸ್

ಹಾವೇರಿ ಜಿಲ್ಲೆಯ ಬುಳ್ಳಾಪುರ ಗ್ರಾಮದ ಬಳಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

A man died in Haveri!
ಬರ್ಬರವಾಗಿ ಸಾವನಪ್ಪಿದ ವ್ಯಕ್ತಿ....ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟ ಮೃತದೇಹ!

By

Published : Feb 15, 2020, 12:08 PM IST

ಹಾವೇರಿ: ಬುಳ್ಳಾಪುರ ಗ್ರಾಮದ ಬಳಿ ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದ್ದು, ನಾನಾ ಅನುಮಾನಗಳಿಗೆ ಕಾರಣವಾಗಿದೆ.

ವ್ಯಕ್ತಿ ಸಾವು....ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟ ಮೃತದೇಹ!

ಮೃತನನ್ನ 50 ವರ್ಷದ ಗದಿಗೆಪ್ಪ ತಿಮ್ಮೇನಹಳ್ಳಿ ಎಂದು ಗುರುತಿಸಲಾಗಿದೆ. ರಾಣೇಬೆನ್ನೂರು ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದ ಗದಿಗೆಪ್ಪ ರಟ್ಟಿಹಳ್ಳಿಗೆ ವಿಳ್ಯದೆಲೆ ಮಾರಲು ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗದಿಗೆಪ್ಪನ ಮೃತದೇಹ ಮತ್ತು ಬೈಕ್ ರಸ್ತೆಯಿಂದ 10 ಅಡಿ ದೂರದಲ್ಲಿ ಬಿದ್ದಿದೆ. ಮೃತದೇಹದ ಮುಖ ಬೈಕ್‌ನ ಸೈಡ್​ಬ್ಯಾಗ್​ನಲ್ಲಿ ಸಿಕ್ಕಿಹಾಕಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಅಲ್ಲದೇ, ಮೃತದೇಹದ ಕಾಲುಗಳಲ್ಲಿ ರಕ್ತ ಕಾಣಿಸಿಕೊಂಡಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ. ರಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details