ಹಾವೇರಿ: ಸಿಡಿಲು ಬಡಿದು ರೈತನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ತೆರೆದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಿಡಿಲು ಬಡಿದು ರೈತ ಸಾವು
ಬ್ಯಾಡಗಿ ತಾಲೂಕಿನ ತೆರೆದಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದ ಹಿನ್ನೆಲೆ ರೈತ ಸಾವಿಗೀಡಾಗಿದ್ದಾನೆ.
ಸಿಡಿಲು ಬಡಿದು ರೈತ ಸಾವು
ಮೃತ ರೈತನನ್ನ ನಾಗಪ್ಪ ಗುಂಡಪ್ಪನವರ(45) ಎಂದು ಗುರ್ತಿಸಲಾಗಿದೆ. ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮೃತದೇಹವನ್ನ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ದಾಖಲಿಸಲಾಗಿದೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.