ಕರ್ನಾಟಕ

karnataka

ETV Bharat / state

ಗುತ್ತಲದಲ್ಲಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ - ಹಾವೇರಿಯಲ್ಲಿ ಬ್ಯಾಂಕ್​ ಉದ್ಯೋಗಿ ಆತ್ಮಹತ್ಯೆ

​​​​​​​ಹಾವೇರಿ ತಾಲೂಕಿನ ಗುತ್ತಲ ಪಟ್ಟಣದಲ್ಲಿ ಅಶುತೋಷ ನರುಕ (30) ನೇಣಿಗೆ ಶರಣಾಗಿದ್ದಾರೆ. ಇವರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್​ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

assistance bank manager suicide in haveri
ಮೃತ ಆಶುತೋಷ ನರುಕ

By

Published : Jan 20, 2020, 4:49 AM IST

ಹಾವೇರಿ: ತಾಲೂಕಿನ ಗುತ್ತಲ ಪಟ್ಟಣದ ಚಿದಂಬರ ನಗರದಲ್ಲಿ ಅಶುತೋಷ ನರುಕ (30) ಎಂಬುವವರು ನೇಣಿಗೆ ಶರಣಾಗಿದ್ದಾರೆ.

ಮೃತ ಆಶುತೋಷ ನರುಕ

ರಾಜಸ್ಥಾನ ಮೂಲದ ಆಶುತೋಷ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್​ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಹೊಳೆಇಟಗಿ ಗ್ರಾಮದ ಶಾಖೆಯಲ್ಲಿದ್ದ ಆಶುತೋಷ ಪಟ್ಟಣದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎಷ್ಟೇ ಹೊತ್ತಾದರೂ ಬಾಗಿಲು ತೆರೆಯದೇ ಇದ್ದಾಗ, ಸಂಶಯಗೊಂಡು ಸ್ಥಳೀಯರು ಕಿಟಕಿಯಲ್ಲಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗುತ್ತಲ ಠಾಣೆ ಪೊಲೀಸರು​ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

For All Latest Updates

ABOUT THE AUTHOR

...view details