ಕರ್ನಾಟಕ

karnataka

By

Published : Jan 8, 2023, 5:29 PM IST

ETV Bharat / state

ಕನ್ನಡನಾಡಿನ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ : ಸಿಎಂ ಬಸವರಾಜ ಬೊಮ್ಮಾಯಿ

86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭ - ಸಮ್ಮೇಳನಾಧ್ಯಕ್ಷರ ನೇತೃತ್ವದಲ್ಲಿ ಕನ್ನಡನಾಡಿನ ಅಭಿವೃದ್ಧಿ- ಸಿಎಂ ಬೊಮ್ಮಾಯಿ ಹೇಳಿಕೆ

cm-basavaraja-bommai-statement-at-haveri
ಕನ್ನಡನಾಡಿನ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ : ಸಿಎಂ ಬಸವರಾಜ ಬೊಮ್ಮಾಯಿ

ಕನ್ನಡನಾಡಿನ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ : ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ :ಸಮ್ಮೇಳನಾಧ್ಯಕ್ಷರ ನೇತೃತ್ವದಲ್ಲಿ ಕನ್ನಡನಾಡಿನ ಅಭಿವೃದ್ದಿಗೆ ಸರ್ಕಾರ ಬದ್ಧವಾಗಿದೆ. ಕಳೆದ ಎರಡು ದಿನಗಳಿಂದ ಹಾವೇರಿ ಜಿಲ್ಲೆಯಿಂದ ರಾಜ್ಯದೆಲ್ಲೆಡೆ ಸಾಹಿತ್ಯದ ಕಂಪು ಹರಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದೆ. ಸಮ್ಮೇಳನದ ಯಶಸ್ವಿಗೆ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್​ ಹೆಬ್ಬಾರ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್​ ಕುಮಾರ್ ಹಾಗೂ ಜಿಲ್ಲಾಡಳಿತಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದರು. ಸಾಹಿತಿಗಳು ನೀಡಿರುವ ಹೇಳಿಕೆಗಳನ್ನು ಸಕಾರಾತ್ಮಕವಾಗಿ ಪರಿಗಣಿಸುವುದಾಗಿ ಇದೇ ವೇಳೆ ತಿಳಿಸಿದರು.

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಎಸ್ಸಿಎಸ್ಟಿ ಸಮಾವೇಶದ ಬಗ್ಗೆ ಮಾತನಾಡಿದ ಅವರು ಸಿಎಂ ಬೊಮ್ಮಾಯಿ ಅವರು, ನಾವು ಈಗಾಗಲೇ ಚುನಾವಣಾ ಅಖಾಡಕ್ಕೆ ಧುಮುಕಿ ಬಹಳ ದಿನಗಳಾಗಿವೆ. ಈ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ. ಎಸ್​​ಸಿ ಎಸ್ಟಿ ಜನಾಂಗಕ್ಕೆ ಯಾರೆಲ್ಲಾ ಯಾವ ಕಾರ್ಯಕ್ರಮ ಕೊಟ್ಟಿದ್ದಾರೆ. ಎಷ್ಟು ಅನುಷ್ಠಾನವಾಗಿದೆ. ಎಸ್​ಸಿ ಎಸ್ಟಿ ಜನಾಂಗದವರ ಬದುಕು ಎಷ್ಟು ಉತ್ತಮವಾಗಿದೆ ಎಂಬುದು ಅವರಿಗೆ ಗೊತ್ತಿದೆ ಎಂದು ತಿಳಿಸಿದರು.

ವೋಟ್​ ಬ್ಯಾಂಕ್​ ರಾಜಕಾರಣ ನಡೆಯುವುದಿಲ್ಲ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಎಲ್ಲರೂ ಈಗ ಜಾಗೃತರಾಗಿದ್ದಾರೆ. ಜಾಗತೀಕರಣದ ನಂತರ ಅವರ ಸ್ಥಾನ ಆಶೋತ್ತರಗಳು ಹೆಚ್ಚಾಗಿವೆ. ಅದಕ್ಕೆ ತಕ್ಕಂತೆ ಸರ್ಕಾರಗಳು ಸ್ಪಂದಿಸಿವೆ. ವಿರೋಧ ಪಕ್ಷದವರು ಸಹಜವಾಗಿ ತಾವು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆ ಎಂಬುದನ್ನು ಹೇಳುತ್ತಾರೆ. ಇನ್ನು ಮುಂದೆ ವೋಟ್​​ ಬ್ಯಾಂಕ್ ರಾಜಕಾರಣ ನಡೆಯುವುದಿಲ್ಲ. ಇದು ಈಗಾಗಲೇ ಸಾಬೀತಾಗಿದೆ. ಮುಂಬರುವ ಚುನಾವಣೆಯಲ್ಲಿ ಸ್ಪಷ್ಟವಾಗಲಿದೆ. ಈಗಾಗಲೇ ನಾವು ಸಹ ರಥಯಾತ್ರೆ ನಡೆಸಲು ಸಿದ್ಧತೆ ನಡೆಸಿರುವುದಾಗಿ ಬೊಮ್ಮಾಯಿ ತಿಳಿಸಿದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ: ಬೆಳಗಾವಿಯಲ್ಲಿ ಶ್ರೀರಾಮಸೇನೆ ಅಧ್ಯಕ್ಷನ ಮೇಲೆ ಗುಂಡಿನ ದಾಳಿ ನಡೆಸಿದ ಕುರಿತು ಮಾತನಾಡಿದ ಮುಖ್ಯಮಂತ್ರಿ ಅವರು, ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಅಭಿಪ್ರಾಯಗಳು ಬೇರೆ ಬೇರೆ ಇರಬಹುದು. ಆದರೆ ಹಿಂಸೆಗೆ ಇಳಿಯಬಾರದು. ಅವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಬೊಮ್ಮಾಯಿ ತಿಳಿಸಿದರು.

ಕನ್ನಡಕ್ಕೆ ಆಪತ್ತು ತರುವ ಶಕ್ತಿ ವಿಶ್ವದಲ್ಲಿ ಹುಟ್ಟಿಲ್ಲ: ಕನ್ನಡಕ್ಕೆ ಆಪತ್ತು ತರುವ ಯಾವುದೇ ಶಕ್ತಿ ವಿಶ್ವದಲ್ಲೇ ಹುಟ್ಟಿಲ್ಲ. ಹುಟ್ಟುವುದೂ ಇಲ್ಲಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಹಾವೇರಿಯಲ್ಲಿ ಮೊನ್ನೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ್ದ ಅವರು, ಸೂರ್ಯ ಚಂದ್ರರು ಇರುವವರೆಗೂ ಶತ ಶತಮಾನಗಳಿಗೂ ಕನ್ನಡ ಭಾಷೆ ಶ್ರೀಮಂತ ಭಾಷೆಯಾಗಿದೆ. ಕರ್ನಾಟಕ ಮಾತೆಗೆ ಜೈಕಾರ ಹಾಕುವ ಮೂಲಕ ತಮ್ಮ ಕನ್ನಡಾಭಿಮಾನವನ್ನು ಮೆರೆದರು. ಭಾರತ ದೇಶದಲ್ಲಿ ಕನ್ನಡಕ್ಕೆ ಮಾತ್ರ ಎಂಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿವೆ. ದೇಶದ ಬೇರೆ ಯಾವ ಭಾಷೆಗೂ ಇಷ್ಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿಲ್ಲ ಎಂದು ಸಿಎಂ ಬೊಮ್ಮಾಯಿ ಮಾತೃಭಾಷೆ ಕುರಿತು ಕೊಂಡಾಡಿದ್ದರು.

ಒಂದು ಭಾಷೆ ಒಂದು ಸಂಸ್ಕೃತಿ ಬೆಳೆಯಬೇಕೆಂದರೆ ತಾನು ನಡೆದು ಬಂದ ದಾರಿಯ ಅವಲೋಕನ ಮಾಡಬೇಕಾಗುತ್ತದೆ. ಆತ್ಮಾವಲೋಕನ ಮಾಡಿಕೊಂಡಾಗ ಮಾತ್ರ ಅದು ತನ್ನ ಮುಂದಿನ ದಾರಿಯನ್ನು ನಿರ್ಧರಿಸುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದರು.

ಇದನ್ನೂ ಓದಿ :ಚಿತ್ರಕಲಾ ಪರಿಷತ್ ಪ್ರಖ್ಯಾತಿ ರಾಷ್ಟ್ರಮಟ್ಟದಲ್ಲೂ ಬೆಳಗಲಿ : ಸಿಎಂ ಬಸವರಾಜ ಬೊಮ್ಮಾಯಿ

ABOUT THE AUTHOR

...view details