ಕರ್ನಾಟಕ

karnataka

By

Published : Jul 9, 2019, 5:15 AM IST

ETV Bharat / state

ಇಂದಿರಾ ಕ್ಯಾಂಟೀನ್​ ಉಪ್ಪಿಟ್ಟಿನಲ್ಲಿ ಹುಳು ಪತ್ತೆ: ಭೇಟಿ ನೀಡಿ ಪರಿಶೀಲಿಸಿದ ಡಿಸಿ

ಇಂದಿರಾ ಕ್ಯಾಂಟೀನ್‌ನಲ್ಲಿ ತಯಾರಿಸಿದ ಉಪ್ಪಿಟ್ಟಿನಲ್ಲಿ ಹುಳು ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೃಷ್ಣ ವಾಜಪೇಯ ಅವರು ಕ್ಯಾಂಟೀನ್‌ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾವೇರಿ

ಹಾವೇರಿ:ನಗರದಲ್ಲಿರುವಇಂದಿರಾ ಕ್ಯಾಂಟೀನ್‌ನಲ್ಲಿ ತಯಾರಿಸಿದ ಉಪ್ಪಿಟ್ಟಿನಲ್ಲಿ ಹುಳು ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯಾದ ಕೃಷ್ಣ ವಾಜಪೇಯ ಅವರು ಸೋಮವಾರ ಕ್ಯಾಂಟೀನ್‌ಗೆ ದಿಢೀರ್ ಭೇಟಿ ನೀಡಿದರು.

ಇಂದಿರಾ ಕ್ಯಾಂಟೀನ್​ಗೆ ಧಿಡೀರ್​ ಭೇಡಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು

ಅಧಿಕಾರಿಗಳ ಜೊತೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಕ್ಯಾಂಟೀನ್​ನಲ್ಲಿ ದಾಸ್ತಾನು ಸೇರಿದಂತೆ ವಿವಿಧ ಪರಿಕರಗಳನ್ನು ಪರಿಶೀಲಿಸಿದರು. ನಂತರ ತಾವೇ ಕ್ಯಾಂಟೀನ್​ನಲ್ಲಿ ತಯಾರಿಸಿದ ಇಡ್ಲಿ, ವಡಾ ಸವಿದರು.

ಬಳಿಕ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಜೊತೆ ಕ್ಯಾಂಟೀನ್​ನಲ್ಲಿ ತಯಾರಿಸುವ ಆಹಾರದ ಕುರಿತು ಚರ್ಚೆ ನಡೆಸಿದರು. ಇದೇ ವೇಳೆ ಶುಚಿತ್ವ ಕಾಪಾಡುವಂತೆ ಸಿಬ್ಬಂದಿಗೆ ಸೂಚಿಸಿದರು.

For All Latest Updates

TAGGED:

ABOUT THE AUTHOR

...view details