ಹಾವೇರಿ: ಸಾಲಬಾಧೆ ತಾಳಲಾರದೆ ರೈತನೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಸಾಗರವಳ್ಳಿ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಾಳದೆ ನೇಣಿಗೆ ಶರಣಾದ ರೈತ - haveri farmar sucide news
ಸಾಲಬಾಧೆ ತಾಳಲಾರದೆ ರೈತನೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಸಾಗರವಳ್ಳಿ ಗ್ರಾಮದಲ್ಲಿ ನಡೆದಿದೆ.
![ಸಾಲಬಾಧೆ ತಾಳದೆ ನೇಣಿಗೆ ಶರಣಾದ ರೈತ farmar commited sucide at haveri](https://etvbharatimages.akamaized.net/etvbharat/prod-images/768-512-6198176-thumbnail-3x2-kusjpg.jpg)
ನೇಣಿಗೆ ಶರಣಾದ ರೈತ
ಸಾಲಬಾಧೆ ತಾಳಲಾರದೆ ನೇಣಿಗೆ ಶರಣಾದ ರೈತ
ಮೃತ ರೈತನನ್ನು 35 ವರ್ಷದ ಪರಶುರಾಮ್ ಬಾಳಿಹಳ್ಳಿ ಎಂದು ಗುರುತಿಸಲಾಗಿದೆ. 1 ಎಕರೆ 16 ಗುಂಟೆ ಜಮೀನು ಹೊಂದಿದ್ದ ಪರಶುರಾಮ್, ಬ್ಯಾಂಕ್, ಫೈನಾನ್ಸ್, ಕೈ ಸಾಲ, ಟ್ರ್ಯಾಕ್ಟರ್ ಸಾಲ ಎಂದು ಸುಮಾರು 18 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಇತ್ತ ಬೆಳೆದ ಭತ್ತದ ಬೆಳೆ ಸಹ ಕೈಕೊಟ್ಟಿದ್ದರಿಂದ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಇನ್ನು ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.