ಕರ್ನಾಟಕ

karnataka

By

Published : Oct 6, 2019, 5:20 AM IST

ETV Bharat / state

ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಬ್ಯಾಂಕ್ ಮತ್ತು ಕೈಸಾಲ ಸೇರಿ ಒಟ್ಟು 4 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದ ರೈತನೊಬ್ಬ, ಹತ್ತಿ ಮತ್ತು ಮೆಕ್ಕೆಜೋಳದ ಬೆಳೆ ಕೈಕೊಟ್ಟಿದ್ದರಿಂದ ಬೇಸತ್ತು ಶನಿವಾರ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಹಾವೇರಿ:ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ನಡೆದಿದೆ.

ಬಸವರಾಜ ಮೊಗಲಿ (51) ಮೃತ ರೈತ. ಒಂದು ಎಕರೆ ಜಮೀನು ಹೊಂದಿದ್ದ ರೈತ ಬಸವರಾಜ, ಬ್ಯಾಂಕ್ ಮತ್ತು ಕೈಸಾಲ ಸೇರಿ ಒಟ್ಟು 4 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಹತ್ತಿ ಮತ್ತು ಮೆಕ್ಕೆಜೋಳದ ಬೆಳೆ ಕೈಕೊಟ್ಟಿದ್ದರಿಂದ ಬೇಸತ್ತು, ಶನಿವಾರ ಮನೆಯಲ್ಲೇ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಕುರಿತು ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details