ಹಾವೇರಿ:ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ - haveri farmer sucide news'
ಬ್ಯಾಂಕ್ ಮತ್ತು ಕೈಸಾಲ ಸೇರಿ ಒಟ್ಟು 4 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದ ರೈತನೊಬ್ಬ, ಹತ್ತಿ ಮತ್ತು ಮೆಕ್ಕೆಜೋಳದ ಬೆಳೆ ಕೈಕೊಟ್ಟಿದ್ದರಿಂದ ಬೇಸತ್ತು ಶನಿವಾರ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
![ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ](https://etvbharatimages.akamaized.net/etvbharat/prod-images/768-512-4665069-thumbnail-3x2-sow.jpg)
ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ
ಬಸವರಾಜ ಮೊಗಲಿ (51) ಮೃತ ರೈತ. ಒಂದು ಎಕರೆ ಜಮೀನು ಹೊಂದಿದ್ದ ರೈತ ಬಸವರಾಜ, ಬ್ಯಾಂಕ್ ಮತ್ತು ಕೈಸಾಲ ಸೇರಿ ಒಟ್ಟು 4 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಹತ್ತಿ ಮತ್ತು ಮೆಕ್ಕೆಜೋಳದ ಬೆಳೆ ಕೈಕೊಟ್ಟಿದ್ದರಿಂದ ಬೇಸತ್ತು, ಶನಿವಾರ ಮನೆಯಲ್ಲೇ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಕುರಿತು ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.