ಕರ್ನಾಟಕ

karnataka

ETV Bharat / state

ಸಾಲ ತೀರಿಸಲಾಗದೇ ನೇಣಿಗೆ ಕೊರಳೊಡ್ಡಿದ ರೈತ - undefined

ಸಾಲಬಾಧೆಗೆ ಹಾವೇರಿ ಜಿಲ್ಲೆಯಲ್ಲಿ ಮತ್ತೋರ್ವ ರೈತ ಬಲಿಯಾಗಿದ್ದಾನೆ. ಕೃಷಿಗಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದ ರೈತ ಅದನ್ನು ತೀರಿಸಲಾಗದೆ ನೇಣಿಗೆ ಶರಣಾಗಿದ್ದಾನೆ.

ರೈತ ಆತ್ಮಹತ್ಯೆ

By

Published : Jul 25, 2019, 6:37 AM IST

Updated : Jul 25, 2019, 7:37 AM IST

ಹಾವೇರಿ:ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದಲ್ಲಿ ನಡೆದಿದೆ.

ಒಂದೂವರೆ ಎಕರೆ ಜಮೀನು ಹೊಂದಿದ್ದ ರೈತ ಶಂಭಣ್ಣ(55) ಬ್ಯಾಂಕ್ ಮತ್ತು ಕೈ ಸಾಲವಾಗಿ ಎಂಟೂವರೆ ಲಕ್ಷ ರೂ. ಸಾಲ ಪಡೆದಿದ್ದ. ಮೆಕ್ಕೆಜೋಳ, ಹತ್ತಿ ಬೆಳೆ ಕೈಕೊಟ್ಟಿದ್ದರಿಂದ ಮನನೊಂದು ತನ್ನ ಜಮೀನಿನಲ್ಲೇ ನೇಣಿಗೆ ಶರಣಾಗಿದ್ದಾಗಿ ತಿಳಿದುಬಂದಿದೆ.

ಈ ಸಂಬಂಧ ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jul 25, 2019, 7:37 AM IST

For All Latest Updates

TAGGED:

ABOUT THE AUTHOR

...view details