ಕರ್ನಾಟಕ

karnataka

ಹಾವೇರಿ ಜಿಲ್ಲೆಯಲ್ಲೂ ಮೈದುಂಬಿದ ನದಿಗಳು: 990 ಮನೆಗಳಿಗೆ ಹಾನಿ, ಹಲವು ಗ್ರಾಮಗಳ ಜನರ ಸ್ಥಳಾಂತರ

By

Published : Aug 9, 2019, 10:25 PM IST

ವರದಾ, ತುಂಗಭದ್ರಾ, ಧರ್ಮಾ ಮತ್ತು ಕುಮದ್ವತಿ ನದಿಗಳು ತುಂಬಿ ಹರಿಯುತ್ತಿರುವುದರಿಂದ ಹಲವು ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ. ಸಂತ್ರಸ್ತ ಗ್ರಾಮಸ್ಥರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಣ

ಹಾವೇರಿ:ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಸರಾಸರಿ 84.5 ಮಿಲಿಮೀಟರ್ ಮಳೆಯಾಗಿದೆ. ಹಿರೇಕೆರೂರಿನಲ್ಲಿ ತಾಲೂಕಿನಲ್ಲಿ 36 ಮಿ.ಮೀ. ಆಗಿದ್ದರೆ, ಹಾನಗಲ್ ತಾಲೂಕಿನಲ್ಲಿ 169 ಮಿಲಿಮೀಟರ್ ಮಳೆಯಾಗಿದೆ. ಮಳೆ ಕಡಿಮೆಯಾಗದ ಹಿನ್ನೆಲೆ, ಶಾಲಾ -ಕಾಲೇಜುಗಳಿಗೆ ಶನಿವಾರ ಸಹ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ವರದಾ, ತುಂಗಭದ್ರಾ, ಧರ್ಮಾ ಮತ್ತು ಕುಮದ್ವತಿ ನದಿಗಳು ಮೈದುಂಬಿಗೊಂಡಿದ್ದು, ಹಲವು ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ. ಜಿಲ್ಲೆಯ ಹರವಿ, ವರದಹಳ್ಳಿ, ನಾಗನೂರು, ನಾಗೇಂದ್ರನಮಟ್ಟಿ, ಕೂಡಲ, ಶೀಗಿಹಳ್ಳಿ, ಅಲ್ಲಿಪುರ, ಮಣ್ಣೂರು, ಶ್ಯಾಡಗುಪ್ಪಿ ಗ್ರಾಮಗಳಲ್ಲಿನ ಜನರನ್ನು ಸ್ಥಳಾಂತರಿಸಲಾಗಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟ

ಶನಿವಾರ ಮತ್ತು ರವಿವಾರ ಜಿಲ್ಲೆಯ ಅಧಿಕಾರಿಗಳಿಗೆ ರಜೆ ರದ್ದು ಮಾಡಿರುವ ಜಿಲ್ಲಾಧಿಕಾರಿ ಭಾಜಪೇಯಿ ಎಂದಿನಂತೆ ಕಾರ್ಯನಿರ್ವಹಿಸಿ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ ಈ ಮಧ್ಯೆ ಹಾವೇರಿ ನಗರ ಪುರದ ಓಣಿಯಲ್ಲಿ ಆಸರೆ ಎಂಬ ನಿರಾಶ್ರಿತರ ಕೇಂದ್ರ ತೆರೆಯಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 77 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯಾದ್ಯಂತ ಇದುವರೆಗೆ 990 ಮನೆಗಳಿಗೆ ಹಾನಿಯಾಗಿದ್ದು, ಅವುಗಳಿಗೆ ಸೂಕ್ತ ಪರಿಹಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಸಂತ್ರಸ್ತರು ಯಾವುದೇ ಕಾರಣಕ್ಕೂ ಭಯಪಡದಿರುವಂತೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಮನವಿ ಮಾಡಿಕೊಂಡಿದ್ದಾರೆ.

ABOUT THE AUTHOR

...view details