ಕರ್ನಾಟಕ

karnataka

By

Published : Mar 2, 2020, 6:35 PM IST

ETV Bharat / state

ಪ್ರಾಚೀನ ಇತಿಹಾಸ ಹೊಂದಿರುವ ಜಾಗ ಏತ ನೀರಾವರಿಗೆ ಬಳಕೆ : ವಿದ್ಯಾರ್ಥಿಗಳಿಂದ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಏತ ನೀರಾವರಿಗೆ ಪ್ರಾಚೀನ ಇತಿಹಾಸ ಹೊಂದಿರುವ ಹಳ್ಳೂರಿನ ಜಾಗವನ್ನು ಬಳಸಿಕೊಳ್ಳುತ್ತಿರುವುದನ್ನು ಖಂಡಿಸಿ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳಿಂದ ಪ್ರತಿಭಟನೆ
protest by students

ಹಾವೇರಿ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಏತ ನೀರಾವರಿಗೆ ಪ್ರಾಚೀನ ಇತಿಹಾಸ ಹೊಂದಿರುವ ಹಳ್ಳೂರಿನ ಜಾಗವನ್ನು ಬಳಸಿಕೊಳ್ಳುತ್ತಿರುವುದನ್ನು ಖಂಡಿಸಿ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳಿಂದ ಪ್ರತಿಭಟನೆ

ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹಳ್ಳೂರಿನ ಜಾಗವು ಪ್ರಾಚೀನ ಇತಿಹಾಸ ಹೊಂದಿದೆ. ಇದನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಏತ ನೀರಾವರಿಗೆ ಪ್ರಾಚೀನ ಇತಿಹಾಸ ಹೊಂದಿರುವ ಜಾಗವನ್ನು ಬಳಿಸಿಕೊಳ್ಳುತ್ತಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸುಮಾರು 9 ಸಾವಿರ ವರ್ಷ ಇತಿಹಾಸವಿರುದ ಜಾಗವನ್ನು ಸಿಎಂ ಯಡಿಯೂರಪ್ಪ ಪ್ರತಿನಿಧಿಸುವ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು ಹಾಳು ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಈ ಯೋಜನೆಗೆ ಬೇಕಾದಷ್ಟು ಜಾಗವಿದ್ದು, ಪುರಾತನ ಜಾಗ ಬಿಟ್ಟು ಬೇರೆ ಕಡೆ ಕಾಮಗಾರಿ ನಡೆಸಬೇಕು. ಬೇರೆ ಜಾಗದಲ್ಲಿ ಕಾಮಗಾರಿ ಕೈಗೊಳ್ಳುವವರೆಗೊ ತಾವು ಪ್ರತಿಭಟನೆ ನಡೆಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದರು.

ABOUT THE AUTHOR

...view details