ರಾಣೆಬೆನ್ನೂರು: ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕಾಯಕ ನಮ್ಮದಾಗಿದೆ ಎಂದು ತೋಟಗಾರಿಕೆ ಮತ್ತು ರೇಷ್ಮೆ ಖಾತೆ ಸಚಿವ ಆರ್.ಶಂಕರ್ ಹೇಳಿದರು.
ರಾಣೆಬೆನ್ನೂರು ತಾಲೂಕಿನ ಆರೇಮಲ್ಲಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಸಂತೆ ಕಟ್ಟೆ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ರೈತರಿಗೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂಬರುವ ಬಜೆಟ್ನಲ್ಲಿ ಸಿಎಂ ಯಡಿಯೂರಪ್ಪ ರೈತರಿಗಾಗಿ ಉತ್ತಮ ಬಜೆಟ್ ಮಂಡನೆ ಮಾಡಲು ಚಿಂತನೆ ಮಾಡಿದ್ದಾರೆ ತಿಳಿಸಿದರು.