ಕರ್ನಾಟಕ

karnataka

ETV Bharat / state

ಉಪ ಚುನಾವಣೆ: ರಾಣೆಬೆನ್ನೂರಲ್ಲಿ ನನಗೆ ಗೆಲುವು ಖಚಿತ ಎಂದ ಕೋಳಿವಾಡ - KB Koliwada is the Congress Party candidate in the Ranbennur constituency

ರಾಣೆಬೆನ್ನೂರು ಕ್ಷೇತ್ರದ ಜನತೆಯು ಒತ್ತಾಯದ ಮೇರೆಗೆ ಈ ಉಪ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ. ಅವರು ಆಶೀರ್ವಾದ ‌ಮಾಡುತ್ತಾರೆ ಎಂಬ ನಂಬಿಕೆಯಿದೆ. ಜಯ ಗಳಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದ ಕೆ.ಬಿ.ಕೋಳಿವಾಡ.

ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಬಿ.ಕೋಳಿವಾಡ

By

Published : Nov 16, 2019, 5:18 PM IST

ರಾಣೆಬೆನ್ನೂರು:ಕ್ಷೇತ್ರದಲ್ಲಿ ಉಪ ಚುನಾವಣೆ ಎದುರಾಗಿದೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿದ್ದು, ಜಯ ಗಳಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಬಿ.ಕೋಳಿವಾಡ ಹೇಳಿದರು.

ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಬಿ.ಕೋಳಿವಾಡ

ನಗರದ ತಹಶೀಲ್ದಾರ್​ ಕಚೇರಿಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ಕ್ಷೇತ್ರದ ಜನತೆ ಒತ್ತಾಯದ ಮೇರೆಗೆ ಈ ಉಪ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ. ಅವರು ಆಶೀರ್ವಾದ ‌ಮಾಡುತ್ತಾರೆ ಎಂಬ ನಂಬಿಕೆಯಿದೆ. ಇನ್ನು ಬಿಜೆಪಿ ಅಭ್ಯರ್ಥಿ ಮೇಲೆ ದಾಖಲಾಗಿರುವ ಕೇಸಿನ ಬಗ್ಗೆ ನನಗೆ ಮಾಹಿತಿಯಿಲ್ಲ. ಮಾಹಿತಿ ಇಲ್ಲದೆ ಮಾತನಾಡಿದರೆ ತಪ್ಪಾಗುತ್ತದೆ ಎಂದರು.

ರಾಣೆಬೆನ್ನೂರು ಕ್ಷೇತ್ರದ ಜನತೆ ಈ ಬಾರಿ ನೂರಕ್ಕೆ ನೂರರಷ್ಟು ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ. ಈ ಬಾರಿ ಗೆಲವು ಪಡೆದರೆ ಕ್ಷೇತ್ರದ ಕೆಲಸ ಹಾಗೂ ಜನರ ಸೇವೆ ಮಾಡುವ ಕನಸು ಹೊಂದಿದ್ದೇನೆ. ಇದು ನನ್ನ ಕೊನೆಯ ಸ್ಪರ್ಧೆ ಅಂತಾ ಈಗಾಗಲೇ ತಿಳಿಸಿದ್ದೇನೆ ಎಂದರು.

For All Latest Updates

ABOUT THE AUTHOR

...view details