ಕರ್ನಾಟಕ

karnataka

By

Published : Dec 22, 2019, 7:54 PM IST

ETV Bharat / state

ಸದ್ಯಕ್ಕಿಲ್ಲ ಆರ್‌.ಶಂಕರ್‌ಗೆ ಸಚಿವ ಸ್ಥಾನ: ರಾಣೆಬೆನ್ನೂರು ಬಿಜೆಪಿ ಕಾರ್ಯಕರ್ತರಿಗೆ ಮತ್ತೆ ನಿರಾಸೆ

ರಾಣೆಬೆನ್ನೂರು ಅನರ್ಹ ಶಾಸಕ ಆರ್​.ಶಂಕರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನ ನೀಡುತ್ತೇವೆ ಎಂದು ಭರವಸೆ ನೀಡಿದ್ದ ಬಿಜೆಪಿ ನಾಯಕರು ಅವರಿಗೆ ಮತ್ತೊಂದು ಆಘಾತ​ ನೀಡಿದ್ದು, ವಿಧಾನ ಪರಿಷತ್​ ನಲ್ಲಿ ಖಾಲಿ ಉಳಿದಿದ್ದ ಒಂದು ಸ್ಥಾನಕ್ಕೆ ಡಿಸಿಎಂ ಲಕ್ಷಣ ಸವದಿಯವರನ್ನು ಆಯ್ಕೆ ಮಾಡಿದ್ದಾರೆ. ಇದರಿಂದಾಗಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಆರ್​.ಶಂಕರ್​ ಇನ್ನೂ ಆರು ತಿಂಗಳು ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ.

let down to R Shankar
ಆರ್​.ಶಂಕರ್, ಅನರ್ಹ ಶಾಸಕ

ರಾಣೆಬೆನ್ನೂರು:ಕ್ಷೇತ್ರದ ಅನರ್ಹ ಶಾಸಕ ಆರ್.ಶಂಕರ್​ಗೆ ಸಚಿವ ಸ್ಥಾನ ಸಿಗಬೇಕೆಂದರೆ ಇನ್ನೂ ಅವರು 6 ತಿಂಗಳು ಕಾಯಬೇಕಾದ ಅನಿವಾರ್ಯತೆ ಎದುರಾಗಿದ್ದು, ಕಾರ್ಯಕರ್ತರಿಗೆ ನಿರಾಸೆ ಉಂಟು ಮಾಡಿದೆ.

ಆರ್​.ಶಂಕರ್, ಅನರ್ಹ ಶಾಸಕ

ದೊಸ್ತಿ ಸರ್ಕಾರದ ವಿರುದ್ಧ ಬಂಡಾಯವೆದ್ದು ಅನರ್ಹಗೊಂಡು ಬಳಿಕ ಕೇಸರಿ ಪಾಳಯ ಸೇರಿಕೊಂಡಿರುವ ಆರ್​. ಶಂಕರ್, ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಶಂಕರ್ ಆಸೆಗೆ ತಣ್ಣೀರೆರಚಿದ ಬಿಜೆಪಿ ನಾಯಕರು, ಅರುಣ ಕುಮಾರ ಪೂಜಾರಗೆ ಟಿಕೆಟ್​ ನೀಡಿದ್ದರು. ಈ ವೇಳೆ ಶಂಕರ್​ ಅವರನ್ನು ಎಂ​ಎಲ್​ಸಿ ಮಾಡಿ ಸಚಿವ ಸ್ಥಾನ ನೀಡುವುದಾಗಿ ಸಿಎಂ ಬಿಎಸ್​ವೈ ಸೇರಿದಂತೆ ಬಿಜೆಪಿ ನಾಯಕರು ಭರವಸೆ ನೀಡಿದ್ದರು.

ಎಂ​ಎಲ್​ಸಿಯಾಗಿ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಶಂಕರ್​ಗೆ ಬಿಜೆಪಿ ನಾಯಕರು ಮತ್ತೊಂದು ಶಾಕ್​ ಕೊಟ್ಟಿದ್ದು, ಶಿವಾಜಿನಗರ ಶಾಸಕ ರಿಜ್ವಾನ್​ ಅರ್ಷದ್ ಅವರಿಂದ ತೆರವಾದ ಪರಿಷತ್​ ಸ್ಥಾನಕ್ಕೆ ಡಿಸಿಎಂ ಲಕ್ಷ್ಮಣ ಸವದಿಅವರನ್ನು ಬಿಜೆಪಿ ಆಯ್ಕೆ ಮಾಡಿದೆ. ಇದರಿಂದ ಸದ್ಯಕ್ಕೆ ಎಲ್ಲಾ ಎಂಎಲ್​ಸಿ ಸ್ಥಾನಗಳೂ ಭರ್ತಿಯಾಗಿದ್ದು, ಶಂಕರ್​ಗೆ ಸಚಿವ ಸ್ಥಾನ ಸಿಗಬೇಕಾದರೆ ಇನ್ನೂ ಆರು ತಿಂಗಳು ಕಾಯಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಮೂಲಕ ತಮ್ಮ ನಾಯಕನಿಗೆ ಸಚಿವ ಸ್ಥಾನ ಸಿಗುತ್ತದೆ ಎಂದು ಕಾಯುತ್ತಿದ್ದ ರಾಣೆಬೆನ್ನೂರು ಬಿಜೆಪಿ ಕಾರ್ಯಕರ್ತರಿಗೆ ನಿರಾಸೆ ಉಂಟಾಗಿದೆ.

ABOUT THE AUTHOR

...view details