ಹಾವೇರಿ:ಸಿದ್ದರಾಮಯ್ಯ ಅವರಿಗೆ ತಾವು ಮತ್ತೆ ಸಿಎಂ ಆಗಬೇಕು ಅನ್ನೋ ಹಂಬಲ, ಆಸೆಯಿದೆ. ಹೀಗಾಗಿ ಅವರು ಯಾವಾಗಲೂ ಸರ್ಕಾರ ಪತನವಾಗಲಿ ಎಂದು ಹೇಳುತ್ತಿರುತ್ತಾರೆ. ಸಚಿವರ, ಶಾಸಕ ರಾಜೀನಾಮೆ ಕೇಳುತ್ತಾರೆ. ಅವರ ಅವಧಿ ವೇಳೆ ಆದ ಘಟನೆಗಳಿಗೆ ರಾಜೀನಾಮೆ ನೀಡಿದ್ದಾರಾ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರಶ್ನಿಸಿದರು.
ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಆಗಬೇಕು ಎಂಬ ಆಸೆಯಿದೆ. ಅದಕ್ಕಾಗಿ ಎಲ್ಲದಕ್ಕೂ ರಾಜೀನಾಮೆ ಕೇಳ್ತಾರೆ. ಕೆ.ಜೆ.ಜಾರ್ಜ್ ಪ್ರಕರಣ ಆದಾಗ ಸಿದ್ದರಾಮಯ್ಯನವರು ರಾಜೀನಾಮೆ ಕೊಟ್ಟಿದ್ರಾ ಎಂದು ಕೇಳಿದರು.