ಹಾವೇರಿ:ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆಸುವ ಕುರಿತಂತೆ ಶನಿವಾರ ನಿರ್ಧರಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಲಾಕ್ಡೌನ್ ಮುಂದುವರೆಸುವ ಕುರಿತು ನಾಳೆ ನಿರ್ಧಾರವಾಗಲಿದೆ: ಬಸವರಾಜ ಬೊಮ್ಮಾಯಿ - ಬಸವರಾಜ್ ಬೊಮ್ಮಾಯಿ
ಕರ್ನಾಟಕದಲ್ಲಿ ಲಾಕ್ಡೌನ್ ಮುಂದುವರಿಸುವ ಕುರಿತು ನಾಳೆ ಪ್ರಧಾನಿಯವರ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಮುಗಿದ ಬಳಿಕ ನಿರ್ಧರಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
![ಲಾಕ್ಡೌನ್ ಮುಂದುವರೆಸುವ ಕುರಿತು ನಾಳೆ ನಿರ್ಧಾರವಾಗಲಿದೆ: ಬಸವರಾಜ ಬೊಮ್ಮಾಯಿ minister basavraj bommaiah reaction about lockdown extend](https://etvbharatimages.akamaized.net/etvbharat/prod-images/768-512-6740544-thumbnail-3x2-bommai.jpg)
ಹಾವೇರಿಯಲ್ಲಿ ಮಾತನಾಡಿದ ಅವರು, ಶನಿವಾರ ಸಿಎಂ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ. ನಂತರವಷ್ಟೆ ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆಸಬೇಕೇ ಅಥವಾ ಬೇಡವೇ ಎಂಬುದು ನಿರ್ಧಾರವಾಗಲಿದೆ. ಈ ಕುರಿತಂತೆ ಈಗಾಗಲೇ ಸಚಿವ ಸಂಪುಟದಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಹಾವೇರಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಬಂದಿಲ್ಲ. ಆದರೂ ಸಹ ಕೊರೊನಾಗೆ ಬಿಡುಗಡೆಯಾದ ಹಣದಲ್ಲಿ ಹಾವೇರಿಯಲ್ಲಿ ಸಹ ಕೊರೊನಾ ಪರೀಕ್ಷೆಯ ಲ್ಯಾಬ್ ಆರಂಭಿಸುವ ಇಂಗಿತ ವ್ಯಕ್ತಪಡಿಸಿದರು. ಕೋವಿಡ್-19 ತಡೆಗಟ್ಟುವುದು ಕೇವಲ ಸರ್ಕಾರದದ ಕಾರ್ಯವಲ್ಲ. ಜನರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಸಮುದಾಯಗಳು ಒಟ್ಟಾಗಿ ಹೋರಾಡಿದಾಗ ಮಾತ್ರ ಇಂತಹ ಹೋರಾಟದಲ್ಲಿ ಜಯ ಗಳಿಸುವುದು ಸಾಧ್ಯ ಎಂದರು.
TAGGED:
ಬಸವರಾಜ್ ಬೊಮ್ಮಾಯಿ