ಕರ್ನಾಟಕ

karnataka

By

Published : Jul 13, 2020, 1:05 PM IST

ETV Bharat / state

ನಗರವನ್ನು ಲಾಕ್​​ಡೌನ್ ಮಾಡುವಂತೆ ರಾಣೆಬೆನ್ನೂರು ಶಾಸಕ ಮನವಿ

ಸಾರ್ವಜನಿಕರ ಆರೋಗ್ಯ ಗಮನದಲ್ಲಿಟ್ಟುಕೊಂಡು ಜುಲೈ 14ರಿಂದ ಜುಲೈ 20ರವರೆಗೆ ಹಾಲು ಮತ್ತು ಔಷಧಿ ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಸಂಪೂರ್ಣ ಬಂದ್ ಮಾಡುವಂತೆ ಶಾಸಕರು ಮನವಿ ಮಾಡಿದ್ದಾರೆ.

ಶಾಸಕ ಅರುಣಕುಮಾರ ಪೂಜಾರ ಮನವಿ
ಶಾಸಕ ಅರುಣಕುಮಾರ ಪೂಜಾರ ಮನವಿ

ರಾಣೆಬೆನ್ನೂರ: ಕೊರೊನಾ ವೈರಸ್ ಹೆಚ್ಚಾಗುತ್ತಿದ್ದು, ಅದನ್ನು ನಿಯಂತ್ರಿಸುವ ಸಲುವಾಗಿ ನಗರವನ್ನು ಲಾಕ್​​ಡೌನ್ ಮಾಡುವಂತೆ ವ್ಯಾಪರಸ್ಥರಿಗೆ ಮತ್ತು ಸಾರ್ವಜನಿಕರಿಗೆ ಶಾಸಕ ಅರುಣಕುಮಾರ ಪೂಜಾರ ಮನವಿ ಮಾಡಿದ್ದಾರೆ.

ಶಾಸಕ ಅರುಣಕುಮಾರ ಪೂಜಾರ ಮನವಿ ಪತ್ರ

ನಗರದಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯಾದ್ಯಂತ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ನಿಯಂತ್ರಿಸುವುದು ಕಷ್ಟವಾಗಿದೆ. ಕಾರಣ ವೈರಸ್ ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಲಾಕ್​​ಡೌನ್ ಮಾಡುವಂತೆ ಮನವಿ ಮಾಡಿದ್ದಾರೆ.

ಸಾರ್ವಜನಿಕರ ಆರೋಗ್ಯ ಗಮನದಲ್ಲಿಟ್ಟುಕೊಂಡು ಜುಲೈ 14ರಿಂದ ಜುಲೈ 20ರವರೆಗೆ ಹಾಲು ಮತ್ತು ಔಷಧಿ ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಸಂಪೂರ್ಣ ಬಂದ್ ಮಾಡುವಂತೆ ಮನವಿ ಮಾಡಿದ್ದಾರೆ.

ABOUT THE AUTHOR

...view details