ಹಾವೇರಿ: ಮೈತ್ರಿ ಸರ್ಕಾರ ಕೆಡವಲು ಕಾರಣರಾಗಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ್ತೆ ಅಧಿಕಾರಕ್ಕಾಗಿ ಹೆಚ್.ಡಿ.ಕುಮಾರಸ್ವಾಮಿ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದರು.
ಅಧಿಕಾರಕ್ಕಾಗಿ ಮತ್ತೆ ಜೆಡಿಎಸ್ ಬಳಿ ಸಿದ್ದರಾಮಯ್ಯ ಭಿಕ್ಷೆ ಬೇಡ್ತಿದ್ದಾರೆ: ಕಟೀಲ್ ವಾಗ್ದಾಳಿ - By-election in Karnataka
ರಟ್ಟಿಹಳ್ಳಿಯಲ್ಲಿ ನಡೆದ ರೋಡ್ ಶೋನಲ್ಲಿ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
![ಅಧಿಕಾರಕ್ಕಾಗಿ ಮತ್ತೆ ಜೆಡಿಎಸ್ ಬಳಿ ಸಿದ್ದರಾಮಯ್ಯ ಭಿಕ್ಷೆ ಬೇಡ್ತಿದ್ದಾರೆ: ಕಟೀಲ್ ವಾಗ್ದಾಳಿ Nalin Kumar Kateel](https://etvbharatimages.akamaized.net/etvbharat/prod-images/768-512-5243801-thumbnail-3x2-sana.jpg)
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
ಹಾವೇರಿಯ ರಟ್ಟಿಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಭಯ ಶುರುವಾಗಿದೆ. ಅವರಿಗೆ ಏಕಾಂಗಿಯಾಗಿ ಹೋರಾಡಿ ಗೆಲ್ಲುವ ವಿಶ್ವಾಸವಿತ್ತು. ಆದರೀಗ ವಿಶ್ವಾಸ ಕಳೆದುಕೊಂಡಿದ್ದಾರೆ. ಜೆಡಿಎಸ್ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್, ಮಾಜಿ ಶಾಸಕ ಯು.ಬಿ.ಬಣಕಾರ್ ಮತ್ತು ಸಂಸದ ಬಿ.ವೈ.ರಾಘವೇಂದ್ರ ಇದ್ದರು.