ಹಾವೇರಿ:ಜಿಲ್ಲೆಯ ವಿವಿಧೆಡೆ ಗುಡುಗು ಸಿಡಿಲು ಸಹಿತ ಸಾಧಾರಣ ಮಳೆಯಾಗಿದ್ದು, ಸಿಡಿಲು ಬಡಿದು ಎತ್ತು ಸಾವಿಗೀಡಾಗಿದೆ.
ರಾಜ್ಯದಲ್ಲಿ ಅಲ್ಲಲ್ಲಿ ಭಾರಿ ಮಳೆ: ಸಿಡಿಲು ಬಡಿದು ಎತ್ತು ಸಾವು - undefined
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜಾಸ್ತಿ ಆಗುತ್ತಿದೆ. ಹಾವೇರಿ ಜಿಲ್ಲೆಯ ಅಗಡಿ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತೊಂದು ಮೃತಪಟ್ಟಿದೆ.
ಎತ್ತು ಸಾವು
ಹಾವೇರಿ ತಾಲೂಕಿನ ಅಗಡಿ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಸಾವನ್ನಪ್ಪಿದೆ. ಶಬ್ಬೀರಸಾಬ್ ಚೋಪದಾರ ಎಂಬ ರೈತನಿಗೆ ಸೇರಿದ ಎತ್ತು ಇದಾಗಿದೆ. ಜಮೀನಿನಿಂದ ಮರಳಿ ಮನೆಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.