ಶಿಗ್ಗಾಂವಿ:ಪಟ್ಟಣದಲ್ಲಿಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ಕನ್ನಡಪರ ಸಂಘಟನೆಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ತಾಲೂಕು ಆಡಳಿತದ ವಿರುದ್ಧ ಸಂಘಟನೆಯ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.
ರಾಜ್ಯೋತ್ಸವದಲ್ಲಿ ಕನ್ನಡಪರ ಸಂಘಟನೆಗಳ ಕಡೆಗಣನೆ ಆರೋಪ... ತಹಶೀಲ್ದಾರ್ ವಿರುದ್ಧ ಪ್ರತಿಭಟನೆ... - ಶಿಗ್ಗಾಂವಿ ತಾಲೂಕು ಆಡಳಿತದ ವಿರುದ್ಧ ಕನ್ನಡ ಪರ ಸಂಘಟನೆ ಹೋರಾಟ
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ತಯಾರಿಗೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಬಳಸಿಕೊಂಡು ಇವತ್ತು ಬೆಳಿಗ್ಗೆ ರಾಜ್ಯೋತ್ಸವ ಆಚರಣೆಗೆ ಕರೆಯದೆ ಕಡೆಗಣಿಸಿದ್ದಾರೆ ಎಂದು ತಾಲೂಕು ಆಡಳಿತದ ಅಧಿಕಾರಿಗಳನ್ನು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ.
![ರಾಜ್ಯೋತ್ಸವದಲ್ಲಿ ಕನ್ನಡಪರ ಸಂಘಟನೆಗಳ ಕಡೆಗಣನೆ ಆರೋಪ... ತಹಶೀಲ್ದಾರ್ ವಿರುದ್ಧ ಪ್ರತಿಭಟನೆ... Protest by pro kannada activist at shiggavi](https://etvbharatimages.akamaized.net/etvbharat/prod-images/768-512-9389421-thumbnail-3x2-sanju.jpg)
ತಹಶೀಲ್ದಾರರ ವಿರುದ್ಧ ಪ್ರತಿಭಟನೆ...
ಕನ್ನಡಪರ ಸಂಘಟನೆಗಳಿಂದ ಶಿಗ್ಗಾಂವಿಯಲ್ಲಿ ಹೋರಾಟ
ಪಟ್ಟಣದ ತಹಶೀಲ್ದಾರರ ಕಚೇರಿ ಮುಂದೆ ಜಮಾಯಿಸಿದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ನಿನ್ನೆ ರಾತ್ರಿ ರಾಜ್ಯೋತ್ಸವ ಕಾರ್ಯಕ್ರಮದ ತಯಾರಿಗೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಬಳಸಿಕೊಂಡು ಇವತ್ತು ಬೆಳಿಗ್ಗೆ ರಾಜ್ಯೋತ್ಸವ ಆಚರಣೆಗೆ ಕರೆಯದೆ ಕಡೆಗಣಿಸಿದೆ ಎಂದು ತಾಲೂಕು ಆಡಳಿತದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.