ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್. ಶಂಕರ್ ಇಂದು ಬೆಳಗ್ಗೆ ಟೆಂಪಲ್ ರನ್ ಶುರು ಮಾಡಿದ್ದಾರೆ.
ಶಾಸಕ ಸ್ಥಾನದಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ಪ್ರಕರಣ ಈಗಾಗಲೇ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಅ. 22 ರಂದು ಸುಪ್ರೀಂಕೋರ್ಟ್ ತೀರ್ಪು ಹೊರ ಬೀಳುವುದು ಭಾಗಶಃ ಖಚಿತವಾಗಿದೆ.
ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್. ಶಂಕರ್ ಇಂದು ಬೆಳಗ್ಗೆ ಟೆಂಪಲ್ ರನ್ ಶುರು ಮಾಡಿದ್ದಾರೆ.
ಶಾಸಕ ಸ್ಥಾನದಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ಪ್ರಕರಣ ಈಗಾಗಲೇ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಅ. 22 ರಂದು ಸುಪ್ರೀಂಕೋರ್ಟ್ ತೀರ್ಪು ಹೊರ ಬೀಳುವುದು ಭಾಗಶಃ ಖಚಿತವಾಗಿದೆ.
ಇದರ ಬೆನ್ನಲ್ಲೇ ಅನರ್ಹ ಶಾಸಕ ಆರ್. ಶಂಕರ್ ತಮ್ಮ ಶಾಸಕ ಸ್ಥಾನದ ಉಳಿವಿಗಾಗಿ ಟೆಂಪಲ್ ರನ್ ಶುರು ಮಾಡಿದ್ದಾರೆ. ಬೆಳಗ್ಗೆ ತಮ್ಮ ಆರಾಧ್ಯ ದೈವ ಶ್ರೀ ಬೀರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಲ್ಲಿ ಬೇಡಿಕೊಂಡರು.
ಬಳಿಕ ಮಾತನಾಡಿದ ಅವರು, ನಾಳೆ ಬೆಳಗ್ಗೆ ದೆಹಲಿಗೆ ಹೋಗಲಿದ್ದೇನೆ. ಮಂಗಳವಾರ ಸುಪ್ರೀಂಕೋರ್ಟ್ ಅನರ್ಹತೆ ಬಗ್ಗೆ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಅನರ್ಹತೆ ಬಗ್ಗೆ ವಿಚಾರಣೆ ನಡೆಯಲಿದ್ದು, ಸುಪ್ರೀಂಕೋರ್ಟ್ ಈ ಪ್ರಕರಣವನ್ನು ಇನ್ನೂ ಮುಂದೂಡುವ ಸಾಧ್ಯತೆಯೂ ಇದೆ ಎಂದರು.