ಹಾವೇರಿ: ಆಕಳಿಗೆ ನೀರು ಕುಡಿಸಲು ಹೋದ ಬಾಲಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೇಕೇರೂರು ತಾಲೂಕಿನ ಹಂಸಭಾವಿ ಗ್ರಾಮದ ದುರ್ಗಾದೇವಿ ಕೆರೆಯಲ್ಲಿ ನಡೆದಿದೆ.
ಹಸುಗೆ ನೀರು ಕುಡಿಸಲು ಹೋದ ಬಾಲಕ ಕೆರೆಯಲ್ಲಿ ಮುಳುಗಿ ಸಾವು - boy died in lake at haveri
ಹಾವೇರಿ ಜಿಲ್ಲೆಯಲ್ಲಿ ಆಕಳಿಗೆ ನೀರು ಕುಡಿಸಲು ಹೋದ ಬಾಲಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
![ಹಸುಗೆ ನೀರು ಕುಡಿಸಲು ಹೋದ ಬಾಲಕ ಕೆರೆಯಲ್ಲಿ ಮುಳುಗಿ ಸಾವು haveri](https://etvbharatimages.akamaized.net/etvbharat/prod-images/768-512-10125043-thumbnail-3x2-vid.jpg)
ಬಾಲಕ ಕೆರೆಯಲ್ಲಿ ಮುಳುಗಿ ಸಾವು
ಪ್ರಮೋದ ಪಾಟೀಲ (12) ಮೃತಪಟ್ಟ ಬಾಲಕನಾಗಿದ್ದಾನೆ. ಬಾಲಕನ ಮೃತದೇಹವನ್ನು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಈ ಸಂಬಂಧ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.