ಕರ್ನಾಟಕ

karnataka

ETV Bharat / state

ಪ್ರವೀಣ್​ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿಯ ಮೂವರು ಕಾರ್ಯಕರ್ತರ ರಾಜೀನಾಮೆ - Etv Bharat Kannada

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಖಂಡಿಸಿ ಹಂತಕರನ್ನು ಬಂಧಿಸಿ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿ ರಾಣೇಬೆನ್ನೂರಿನ ಮೂವರು ಬಿಜೆಪಿ ಕಾರ್ಯಕರ್ತರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

Kn_hvr_01_bjp_raajename_7202143
ರಾಜೀನಾಮೆ ನೀಡಿದ ಬಿಜೆಪಿ ಕಾರ್ಯಕರ್ತರು

By

Published : Jul 28, 2022, 11:34 AM IST

ಹಾವೇರಿ:ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ರಾಣೇಬೆನ್ನೂರಿನ ಮೂವರು ಬಿಜೆಪಿಯ ಕಾರ್ಯಕರ್ತರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಘು ಬಗಾಡೆ, ಗ್ರಾಮೀಣ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮನೋಜ ಡೊಳ್ಳಿನ ಹಾಗೂ ನಗರ ಯುವ ಮೋರ್ಚಾ ಉಪಾಧ್ಯಕ್ಷ ಚೇತನ ರಾಜೀನಾಮೆ ನೀಡಿರುವ ಕಾರ್ಯಕರ್ತರು.

ರಾಜೀನಾಮೆ ಪತ್ರ

ಈ ಹಿಂದೆ ಹಿಂದೂ ಯುವಕ ಹರ್ಷನ ಹತ್ಯೆಯಾಗಿತ್ತು. ಇದೀಗ ಪ್ರವೀಣ್​ ನೆಟ್ಟಾರು ಕೊಲೆಯಾಗಿದೆ. ರಾಜ್ಯ ಸರ್ಕಾರ ಹಂತಕರನ್ನು ಕೂಡಲೇ ಬಂಧಿಸಿ, ಶಿಕ್ಷೆ ನೀಡಬೇಕು. ಮುಂದೆ ಇಂತಹ ಘಟನೆಗಳ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಮೂವರು ಸಹೋದರಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ... ಕಾರಣ?

ABOUT THE AUTHOR

...view details