ಕರ್ನಾಟಕ

karnataka

By

Published : Dec 17, 2021, 10:36 AM IST

ETV Bharat / state

2 ಕಾಡಾನೆ ಪ್ರತ್ಯಕ್ಷ : ಶಿಗ್ಗಾಂವಿ ತಾಲೂಕಿನ ರೈತರಲ್ಲಿ ಹೆಚ್ಚಿದ ಆತಂಕ

ಕಾಡಾನೆಗಳು ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ನಾಶ ಮಾಡುವುದರೊಂದಿಗೆ, ರೈತರಿಗೂ ತೊಂದರೆ ಉಂಟು ಮಾಡುವ ಸಾಧ್ಯತೆಯಿದೆ. ಹೀಗಾಗಿ, ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕಾಡಾನೆಗಳನ್ನ ಅರಣ್ಯ ಪ್ರದೇಶಕ್ಕೆ ಓಡಿಸುವಂತೆ ಸ್ಥಳೀಯ ರೈತರು ಒತ್ತಾಯಿಸಿದ್ದಾರೆ..

Wild Elephants Appear
ಬಂಕಾಪುರ ಸುತ್ತಮುತ್ತಲಿನ ಜಮೀನಿನಲ್ಲಿ ಕಾಣಿಸಿಕೊಂಡ ಕಾಡಾನೆಗಳು

ಹಾವೇರಿ : ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದೆರಡು ದಿನಗಳಿಂದ ಕಾಡಾನೆಗಳು ಕಾಣಿಸಿಕೊಂಡಿವೆ.

ಬಂಕಾಪುರ ಸುತ್ತಮುತ್ತಲಿನ ಜಮೀನಿನಲ್ಲಿ ಕಾಣಿಸಿದ ಕಾಡಾನೆಗಳು

ಕಾರವಾರ ಜಿಲ್ಲೆಯ ಅರಣ್ಯ ಪ್ರದೇಶದಿಂದ ಕಾಡಾನೆಗಳು ಬಂದಿರುವ ಸಾಧ್ಯತೆಯಿದೆ. ರೈತರ ಜಮೀನುಗಳಲ್ಲಿ ಓಡಾಡಿಕೊಂಡಿವೆ. ಜಮೀನಿನಲ್ಲಿ ಕಾಡಾನೆ ಓಡಾಟ ಹಿನ್ನೆಲೆ ರೈತರು ಆತಂಕಕ್ಕೆ‌ ಸಿಲುಕಿದ್ದಾರೆ.

ಕಾಡಾನೆಗಳು ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ನಾಶ ಮಾಡುವುದರೊಂದಿಗೆ, ರೈತರಿಗೂ ತೊಂದರೆ ಉಂಟು ಮಾಡುವ ಸಾಧ್ಯತೆಯಿದೆ. ಹೀಗಾಗಿ, ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕಾಡಾನೆಗಳನ್ನ ಅರಣ್ಯ ಪ್ರದೇಶಕ್ಕೆ ಓಡಿಸುವಂತೆ ಸ್ಥಳೀಯ ರೈತರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಸಾವು ಗೆದ್ದ ದಿವ್ಯಾಂಶಿ... ಕೊಳವೆ ಬಾವಿಗೆ ಬಿದ್ದಿದ್ದ 1 ವರ್ಷದ ಬಾಲಕಿಯ ರಕ್ಷಣೆ

ABOUT THE AUTHOR

...view details