ಕಲಬುರಗಿ: ಅಫಜಲಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಸುಮಾರು 5 ವರ್ಷಗಳಿಂದ ದ್ವೀತಿಯ ದರ್ಜೆ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗುರುರಾಜ ಮಿರ್ಗಿ (33) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾದಿಂದ ಚಿಕ್ಕ ವಯಸ್ಸಿನಲ್ಲೇ ಜೀವನ ಪಯಣ ಮುಗಿಸಿದ ಅಧಿಕಾರಿ! - ಕಲಬುರಗಿಯಲ್ಲಿ ಕೊರೊನಾಗೆ ಅಧಿಕಾರಿ ಸಾವು,
ಕೊರೊನಾದಿಂದಾಗಿ ಅಧಿಕಾರಿಯೊಬ್ಬರು ಚಿಕ್ಕ ವಯಸ್ಸಿನಲ್ಲಿ ಜೀವನದ ಪಯಣ ಮುಗಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
![ಕೊರೊನಾದಿಂದ ಚಿಕ್ಕ ವಯಸ್ಸಿನಲ್ಲೇ ಜೀವನ ಪಯಣ ಮುಗಿಸಿದ ಅಧಿಕಾರಿ! officer death by corona, officer death by corona in Kalaburagi, Kalaburagi news, ಕೊರೊನಾಗೆ ಅಧಿಕಾರಿ ಸಾವು, ಕಲಬುರಗಿಯಲ್ಲಿ ಕೊರೊನಾಗೆ ಅಧಿಕಾರಿ ಸಾವು, ಕಲಬುರಗಿ ಸುದ್ದಿ,](https://etvbharatimages.akamaized.net/etvbharat/prod-images/768-512-11799682-710-11799682-1621311203292.jpg)
ಒಂದು ವಾರದ ಹಿಂದೆ ಜ್ವರ ಕಾಣಿಸಿಕೊಂಡಾಗ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಜ್ವರ ಉಲ್ಬಣಗೊಂಡಾಗ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆಗ ಇವರಿಗೆ ಕೊರೊನಾ ಸೋಂಕು ತಗುಲಿರುವದು ದೃಢಪಟ್ಟಿತ್ತು. ಚಿಕಿತ್ಸೆ ಫಲಿಸದೆ ಜಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ಸಾವನ್ನಪ್ಪಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಸೋಮವಾರ ಸಂಜೆ 4 ಗಂಟೆಗೆ ಆಲಮೇಲ ಗ್ರಾಮದಲ್ಲಿರುವ ಇವರ ಸ್ವಂತ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಆಲಮೇಲ ಗ್ರಾಮದವರಾಗಿದ್ದ ಗುರುರಾಜ, 2002ರಲ್ಲಿ ಕೆ.ಪಿ.ಎಸ್.ಸಿ ಮುಖಾಂತರ ಶಿಕ್ಷಣ ಇಲಾಖೆಯ ದ್ವೀತಿಯ ದರ್ಜೆ ಸಹಾಯಕರಾಗಿ ನೇಮಕಗೊಂಡು ಜೇವರ್ಗಿ, ಅಫಜಲಪುರ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ 9 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.