ಕಲಬುರಗಿ:ಬಿಜೆಪಿ ಸರ್ಕಾರ ಹೈದರಾಬಾದ್ ಕರ್ನಾಟಕವನ್ನು ಹೆಸರಿಗೆ ಮಾತ್ರ ಕಲ್ಯಾಣ ಕರ್ನಾಟಕವೆಂದು ಮಾಡಿದೆ. ಮಕ್ಕಳಿಗಾಗಿ ಯಾವುದೇ ಯೋಜನೆ ರೂಪಿಸಿಲ್ಲ ಎಂದು ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಆರೋಪಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ - teachers day demands
ಕಲ್ಯಾಣ ಕರ್ನಾಟಕಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗುತ್ತಿಲ್ಲ. ಈಗಲಾದರೂ ಈ ಭಾಗದ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಆಗ್ರಹಿಸಿದ್ದಾರೆ.
![ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ appeal to educational need fullfill in kalyana karnataka region](https://etvbharatimages.akamaized.net/etvbharat/prod-images/768-512-8689787-488-8689787-1599301912937.jpg)
ಜಗದೇವ ಗುತ್ತೇದಾರ
ಜಗದೇವ ಗುತ್ತೇದಾರ ಆರೋಪ
ಕಲಬುರಗಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗುತ್ತಿಲ್ಲ. ಜೊತೆಗೆ ಕೊರೊನಾ ನೆಪದಲ್ಲಿ ಶಿಕ್ಷಕರಿಗೆ ಸಕಾಲಕ್ಕೆ ವೇತನವನ್ನೂ ಪಾವತಿಸುತ್ತಿಲ್ಲ. ಈ ನಡುವೆ ಆನ್ಲೈನ್ ಮೂಲಕ ಪಾಠ ಬೋಧನೆಗೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.
ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದ ಕೊಡುಗೆ ಇದೇನಾ ಎಂದು ಪ್ರಶ್ನಿಸಿರುವ ಜಗದೇವ ಗುತ್ತೇದಾರ, ಈಗಲಾದರೂ ಈ ಭಾಗದ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.