ಕರ್ನಾಟಕ

karnataka

ETV Bharat / state

ಕಲಬುರಗಿ: ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ದ್ವಿಪಕ್ಷೀಯ ಒಪ್ಪಂದ

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಇಂದು ನಡೆಸಿದ ಕಬ್ಬು ಬೆಳೆಗಾರರ ಮತ್ತು ಸಕ್ಕರೆ ಕಾರ್ಖಾನೆ ನಡುವಿನ ಸಭೆಯಲ್ಲಿ ದ್ವಿಪಕ್ಷೀಯ ಒಪ್ಪಂದವನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್ ಹೇಳಿದರು.

By

Published : Oct 12, 2022, 10:54 PM IST

bilateral-agreement-for-sugarcane-farmers-problem
ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ದ್ವಿಪಕ್ಷೀಯ ಒಪ್ಪಂದ

ಕಲಬುರಗಿ : ಕಬ್ಬು ಬೆಳೆಗಾರರ ಅನೇಕ ಸಮಸ್ಯೆಗಳಿಗೆ ಅಂತ್ಯ ಹಾಡಲು ಇಂದು ನಡೆಸಿದ ರೈತರ ಮತ್ತು ಸಕ್ಕರೆ ಕಾರ್ಖಾನೆಗಳ ನಡುವಿನ ಸಭೆ ಫಲಪ್ರದವಾಗಿದ್ದು, ಕಬ್ಬು ಬೆಳೆಗಾರರ ಹಿತದಲ್ಲಿ ಜಿಲ್ಲೆಯ ಮಟ್ಟಿಗೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಸಕ್ಕರೆ ಕಾರ್ಖಾನೆ ಮತ್ತು ರೈತರೊಂದಿಗೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬು ನಿಯಂತ್ರಣ ಆದೇಶ-1966ರ ನಿಯಮ 6ರ ಪ್ರಕಾರ ದ್ವಿಪಕ್ಷೀಯ ಒಪ್ಪಂದ ಕಡ್ಡಾಯವಾಗಿದೆ. ಇದನ್ನು ಕಲಬುರಗಿ ಜಿಲ್ಲೆಯಲ್ಲಿ ಪ್ರಥಮವಾಗಿ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ರೈತರ ಸಹಮತದೊಂದಿಗೆ ಇಂದು ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಒಪ್ಪಂದದ ನಮೂನೆಯನ್ನು ಡಿ.ಸಿ. ಕಚೇರಿಯಿಂದಲೇ ತಯಾರಿಸಿ ತಹಶೀಲ್ದಾರರ ಮೂಲಕ ರೈತರಿಗೆ ಮತ್ತು ಕಾರ್ಖಾನೆಗಳಿಗೆ ನೀಡಲಾಗುತ್ತದೆ.

ಇದರಿಂದ ಕಂಪನಿಗಳಲ್ಲಿ ಲಂಚಗಳಿಗೆ ಕಡಿವಾಣ ಬೀಳಲಿದ್ದು, ಅನ್ನದಾತ ರೈತನಿಗೆ ಕಿರಿಕಿರಿ ತಪ್ಪಲಿದೆ. ಒಪ್ಪಂದದಂತೆ ಕಾಲಮಿತಿಯಲ್ಲಿ ಹಣ ಸಿಗಲಿದೆ. ಪರಿಹಾರ ಕೊಟ್ಟಿಲ್ಲ, ಕಬ್ಬು ಕಟಾವಾಗಿಲ್ಲ ಎನ್ನುವ ದೂರುಗಳು ಇನ್ನು ಮುಂದೆ ಬಾರದಂತೆ ಮುನ್ನೆಚ್ಚರಿಕೆ ಕ್ರಮವಹಿಸಿದ್ದೇವೆ ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಇದೇ ವೇಳೆ, ಹೇಳಿದರು.

ರೈತರು ಬೆಳೆದ ಕಬ್ಬನ್ನು ಸಕಾಲದಲ್ಲಿ ಕಟಾವು ಮಾಡಿಕೊಂಡು ಹೋಗಲು ಆಯಾ ಸಕ್ಕರೆ ಕಾರ್ಖಾನೆಗಳಿಂದ ಪ್ರದೇಶವಾರು ಇಬ್ಬರು ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು. ಕಬ್ಬು ಕಟಾವು ಮಾಡುವ ಮುನ್ನ ಗ್ರಾಮಸ್ಥರಿಗೆ ಮೊದಲೇ ಮಾಹಿತಿ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಮೊಬೈಲ್ ತಂತ್ರಾಂಶ ಸಹ ಸಿದ್ಧಪಡಿಸಲಾಗುತ್ತಿದೆ.

ಇನ್ನೂ ಕಬ್ಬು ತೂಕದ ದೂರುಗಳ ನಿವಾರಣೆಗೆ ಕಾನೂನು ಮಾಪನಶಾಸ್ತ್ರ ಇಲಾಖೆಯಿಂದ 2 ರ್ಯಾಪಿಡ್​ ತಪಾಸಣಾ ತಂಡಗಳನ್ನು ರಚಿಸಲಾಗಿದೆ. ಅಲ್ಲದೆ ಇದೇ ಇಲಾಖೆಯಡಿ ಕಬ್ಬು ಕಟಾವು ಮತ್ತು ಮಾರಾಟ ಕುರಿತಂತೆ ರೈತರು ದೂರು ಸಲ್ಲಿಸಲು ಸಹಾಯವಾಣಿ ಸ್ಥಾಪಿಸಲಾಗುತ್ತಿದೆ. ರೈತರು ದೂರು ಸಲ್ಲಿಸಿದ 24 ಗಂಟೆಯಲ್ಲಿ ಅಧಿಕಾರಿಗಳ ತಂಡ ಹೊಲಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ :2,052 ಕಡೆ ರಾಜಕಾಲುವೆ ಒತ್ತುವರಿ ತೆರವು: ಹೈಕೋರ್ಟ್​ಗೆ ಬಿಬಿಎಂಪಿ ಮಾಹಿತಿ

ABOUT THE AUTHOR

...view details