ಕಲಬುರಗಿ:ಈ ಬಾರಿಯ ವಿಮೋಚನಾ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗಿಯಾಗಲಿದ್ದಾರೆ ಎಂದು ಕಲ್ಯಾಣ ಕರ್ನಾಟಕ ವಿಮೋಚನೆ ಮತ್ತು ಅಭಿವೃದ್ಧಿ ಸಮಿತಿ ತಿಳಿಸಿದೆ.
ಕಲ್ಯಾಣ ಕರ್ನಾಟಕ ವಿಮೋಚನೆ ದಿನದಲ್ಲಿ ಸಿಎಂ ಭಾಗಿಯಾಗಲಿದ್ದಾರೆ: ಶಶೀಲ್ ನಮೋಶಿ - ವಿಮೋಚನಾ ದಿನಾಚರಣೆಗೆ ಶಶೀಲ್ ನಮೋಶಿ ಸಿಎಂ ಭಾಗಿಯಾಗಲಿದ್ದಾರೆ ಎಂದ
ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕವೆಂದು ಮಾರ್ಪಡಿಸಿದ ನಂತರ ನಡೆಯುತ್ತಿರುವ ಮೊದಲ ವಿಮೋಚನಾ ದಿನಾಚರಣೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಲಿದ್ದು, ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಶಶೀಲ್ ನಮೋಶಿ ಹೇಳಿದ್ದಾರೆ.
![ಕಲ್ಯಾಣ ಕರ್ನಾಟಕ ವಿಮೋಚನೆ ದಿನದಲ್ಲಿ ಸಿಎಂ ಭಾಗಿಯಾಗಲಿದ್ದಾರೆ: ಶಶೀಲ್ ನಮೋಶಿ](https://etvbharatimages.akamaized.net/etvbharat/prod-images/768-512-4410634-thumbnail-3x2-vickyjpg.jpg)
ವಿಮೋಚನಾ ದಿನಾಚರಣೆಗೆ ಶಶೀಲ್ ನಮೋಶಿ ಸಿಎಂ ಭಾಗಿಯಾಗಲಿದ್ದಾರೆ ಎಂದ
ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ವಿಚಾರ
ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಮಿತಿ ಅಧ್ಯಕ್ಷ ಶಶಿಲ್ ನಮೋಶಿ, ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕವೆಂದು ಮಾರ್ಪಡಿಸಿದ ನಂತರ ನಡೆಯುತ್ತಿರುವ ಮೊದಲ ವಿಮೋಚನಾ ದಿನ ಇದಾಗಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 17 ರಂದು ಯಡಿಯೂರಪ್ಪ ಅವರು ಭಾಗಿಯಾಗಿ, ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಅಲ್ಲದೆ ಕೆ.ಎ.ಟಿ. ಕಛೇರಿಗೂ ಚಾಲನೆ ನೀಡಲಿದ್ದಾರೆ ಎಂದರು.
ವಿಮೋಚನಾ ಹೋರಾಟದ ಇತಿಹಾಸ ರಚನೆಗೆ ಸಂಬಂಧಿಸಿಯೂ ಮುಖ್ಯಮಂತ್ರಿಗಳು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ನಮೋಶಿ ತಿಳಿಸಿದ್ದಾರೆ.