ಕರ್ನಾಟಕ

karnataka

ETV Bharat / state

ಕಲಬುರಗಿಯಲ್ಲಿ ವರುಣನ ಅಬ್ಬರ: ಹಲವಡೆ ಸಂಪರ್ಕ ಕಡಿತ, ಶಾಲಾ ಮಕ್ಕಳು, ರೈತರು ತತ್ತರ - ಮಳೆಯಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಬಂದ್​

ಕಲಬುರಗಿ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಹಲವಡೆ ಸಂಪರ್ಕ ಕಡಿತವಾಗಿದೆ. ಶಾಲಾ ಮಕ್ಕಳು, ರೈತರು ಸೇರಿದಂತೆ ಮಳೆಗೆ ತತ್ತರಿಸಿದ್ದಾರೆ.

crop and houses damage over Heavy rain  damage over Heavy rain in Kalaburagi  heavy rain in Kalaburagi  ಕಲಬುರಗಿಯಲ್ಲಿ ವರುಣನ ಅಬ್ಬರ  ಕಲಬುರಗಿ ಜಿಲ್ಲೆಯಲ್ಲಿ ವರುಣನ ಆರ್ಭಟ  ಧಾರಾಕಾರ ಮಳೆಗೆ ಜನ‌ ತತ್ತರ  ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತ  ಶಾಲಾ ಮಕ್ಕಳಿಗೆ ಎದುರಾದ ಸಂಕಷ್ಟ  ಮಳೆಯಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಬಂದ್​ ಮಳೆಗೆ ನೂರಾರು ಎಕರೆ ಬೆಳೆ ಹಾನಿ
ಕಲಬುರಗಿಯಲ್ಲಿ ವರುಣನ ಅಬ್ಬರ

By

Published : Sep 10, 2022, 12:02 PM IST

ಕಲಬುರಗಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ‌ ತತ್ತರಿಸಿ ಹೋಗಿದ್ದಾರೆ. ಸೇತುವೆಗಳು ಜಲಾವೃತವಾಗಿ ಜಿಲ್ಲೆಯ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಮನೆಗಳಿಗೆ, ಜಮೀನುಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಶಾಲೆಗೆ ತೆರಳಿದ ಮಕ್ಕಳು, ಜಮೀನುಗಳಿಗೆ ತೆರಳಿದ ರೈತರು ಮರಳಿ ಗ್ರಾಮಕ್ಕೆ ಹೋಗಲು ಪರದಾಡಿದ್ದಾರೆ.

ಮಳೆಯಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಬಂದ್​:ಕಳೆದ ದಿನ ಮಧ್ಯಾಹ್ನದಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಆಳಂದ ತಾಲೂಕಿನ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ. ಕಲ್ಲಹಂಗರಗಾ ಗ್ರಾಮದ ಹೊರ ವಲಯದಲ್ಲಿರುವ ಹಳ್ಳ ತುಂಬಿ‌ ಸೇತುವೆ ಮೇಲೆ ಹರಿಯುತ್ತಿದೆ. ಹೀಗಾಗಿ ಜಂಬಗಾ (ಬಿ) ಕ್ರಾಸ್, ಕಲ್ಲಹಂಗರಗಾ ಮಾರ್ಗವಾಗಿ ಚಿಂಚನಸೂರ ಗ್ರಾಮಕ್ಕೆ ತೆರಳುವ ರಸ್ತೆ ಸಂಪೂರ್ಣ ಕಡಿತಗೊಂಡಿದೆ.

ಕಲಬುರಗಿಯಲ್ಲಿ ವರುಣನ ಅಬ್ಬರ

ಶಾಲಾ ಮಕ್ಕಳಿಗೆ ಎದುರಾದ ಸಂಕಷ್ಟ:ಚಿಂಚೋಳಿ ತಾಲೂಕಿನಲ್ಲಿಯೂ ಮಳೆಯಿಂದ ಜನ ಪರದಾಡಿದ್ದಾರೆ. ಮಳೆಯಿಂದಾಗಿ ಕೋಡ್ಲಿ ಗ್ರಾಮದ ಮುಖ್ಯದ್ವಾರದ ಅಗಸಿ ಹತ್ರ ಸಣ್ಣ ಹಳ್ಳ ತುಂಬಿ ಹರಿಯುತ್ತಿದ್ದು, ಶಾಲೆಗೆ ತೆರಳಿದ ಶಾಲಾಮಕ್ಕಳು ಗ್ರಾಮದೊಳಗೆ ಹೋಗಲು ತೊಂದರೆ ಅನುಭವಿಸಬೇಕಾಯಿತು. ರೈತರು ಕೂಡಾ ಜಮೀನಿನಿಂದ ಗ್ರಾಮಕ್ಕೆ ಹೋಗಲು ಹರಸಾಹಸ ಪಟ್ಟರು. ಕುಕ್ಲೂರು ಭಂಟನಳ್ಳಿ ಗಡಿಕೇಶ್ವರ ಗ್ರಾಮದಲ್ಲಿ ಅನೇಕ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಗಡಿಕೇಶ್ವರ, ಭೂತ್ಪೂರ, ಚಿಂತಪಳ್ಳಿ ಗ್ರಾಮಗಳಲ್ಲಿ ನಾಲೆಗಳು ತುಂಬಿ ಹರಿದ ಪರಿಣಾಮ ಗ್ರಾಮಗಳ ಸಂಪರ್ಕ ಕಡಿತವಾಗಿದೆ.

ಕಲಬುರಗಿಯಲ್ಲಿ ವರುಣನ ಅಬ್ಬರ

ಮಳೆಗೆ ನೂರಾರು ಎಕರೆ ಬೆಳೆ ಹಾನಿ, ರೈತ ಕಂಗಾಲು: ಕಲಬುರಗಿ ತಾಲೂಕಿನ ಹೊನ್ನಕಿರಣಗಿಯಲ್ಲಿಯೂ ಮಳೆ ಸಾಕಷ್ಟು ಅವಘಡ ಸೃಷಿ ಮಾಡಿದೆ. ಗ್ರಾಮದ ಸೂತ್ತಲೂ ಮಳೆ ನೀರು ಸುತ್ತುವರೆದ ಪರಿಣಾಮ ಗ್ರಾಮ ನಡುಗಡ್ಡೆಯಾಗಿ ಪರಿವರ್ತನೆಯಾಗಿದೆ. ಹೊನ್ನಕಿರಣಗಿ ಸೇರಿ ಸೂತ್ತಮುತ್ತಲಿನ ಅನೇಕ ಗ್ರಾಮಗಳ ನೂರಾರು ಎಕರೆ ಜಮೀನಿನಲ್ಲಿ ಮಳೆ ನೀರು ನಿಂತು ಕೆರೆಯಂತಾಗಿದೆ. ಬೆಳೆಗಳು ಸಂಪೂರ್ಣ ಹಾನಿಯಾಗುವ ಹಂತಕ್ಕೆ ತಲುಪಿದೆ.

ಕಲಬುರಗಿಯಲ್ಲಿ ವರುಣನ ಅಬ್ಬರ

ಕಲಬುರಗಿ ಹೊರವಲಯದ ಕಣದಾಳ ಗ್ರಾಮದಲ್ಲಿ ಮಳೆ ನೀರು ನುಗ್ಗಿ ಗ್ರಾಮಸ್ಥರು ತೊಂದರೆ ಅನುಭವಿಸಿದ್ದಾರೆ. ಗ್ರಾಮದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಮನೆಯ ಸಾಮಗ್ರಿಗಳು ಹಾನಿಯಾಗಿವೆ. ಗ್ರಾಮದ ರಸ್ತೆಗಳು ಜಲಾವೃತವಾದ ಕಾರಣ ವಾಹನ ಸಂಚಾರ, ಜನ ಸಂಚಾರಕ್ಕೆ ಹರಸಾಹಸ ಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು ಮಳೆ ಕೊಂಚ ತಗ್ಗಿದೆ. ಆದ್ರೆ ಮುಂದಿನ ಮೂರು ದಿನಗಳ ಕಾಲ ಬಿರುಸಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಓದಿ:ಹಳ್ಳದ ನೀರಿನಲ್ಲಿ ಕೊಚ್ಚಿಹೋದ ಯುವತಿ.. ಭಾರಿ ಮಳೆಗೆ ನಲುಗಿದ ಕಲಬುರಗಿ ಮಂದಿ

ABOUT THE AUTHOR

...view details