ಕರ್ನಾಟಕ

karnataka

ETV Bharat / state

ಜಲಾಶಯದ ಒಡೆದಿರುವೆ ಕಾಲುವೆಯಿಂದ ಜಮೀನಿಗೆ ನುಗ್ಗಿದ ನೀರು : ಬೆಳೆ ಪರಿಹಾರಕ್ಕೆ ರೈತರ ಆಗ್ರಹ - ಕಲಬುರಗಿಯ ಕಾಳಗಿಯ ರೈತರ ಬೆಳೆ ಹಾನಿ

ಒಂದೆಡೆ ಬೆಳೆ ಕೊಚ್ಚಿ ಹೋಗಿದ್ದು, ಮತ್ತೊಂದೆಡೆ ನೀರಿನ ರಭಸಕ್ಕೆ ಫಲವತ್ತಾದ ಮಣ್ಣು ಕೂಡ ಕೊಚ್ಚಿಕೊಂಡು ಹೋಗಿ ಜಮೀನಿನಲ್ಲಿ ಕಲ್ಲು ಬಂಡೆಗಳು ತೇಲಿವೆ. ಇದರಿಂದ ರೈತರು ಮತ್ತೆ ಕೃಷಿ ಮಾಡದಂತಹ ಸ್ಥಿತಿ ನಿರ್ಮಾಣವಾಗಿದೆ‌. ರೈತರ ಅನ್ನಕ್ಕೆ ಮಣ್ಣು ಹಾಕುವ ಕೆಲಸ ಅಧಿಕಾರಿಗಳು ಮಾಡಿದ್ದಾರೆ ಎಂದು ರೈತರು ಕೆಂಡ ಕಾರುತ್ತಿದ್ದಾರೆ..

Crop damaged due to water flowing from a broken reservoir at Kalburgi
ಜಲಾಶಯ ಕಾಲುವೆಯಿಂದ ಜಮೀನಿಗೆ ನುಗ್ಗಿದ ನೀರು

By

Published : Jul 23, 2021, 8:30 PM IST

ಕಲಬುರಗಿ :ನೀರಾವರಿ ಇಲಾಖೆ ಅಧಿಕಾರಿಗಳು, ಗುತ್ತಿಗೆದಾರರ ಕಳಪೆ ಕಾಮಗಾರಿಯಿಂದ ಜಲಾಶಯದ ಕಾಲುವೆ ಒಡೆದು ನೂರಾರು ಎಕರೆ ರೈತರ ಜಮೀನಿಗೆ ನೀರು ನುಗ್ಗಿದೆ. ಇದರಿಂದ ರೈತರು ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಕಾಲುವೆಗೆ ನೀರು ನುಗ್ಗಿ ಬೆಳೆ ಹಾನಿ, ಪರಿಹಾರಕ್ಕೆ ರೈತರು ಆಗ್ರಹ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಅರಣಕಲ್ ಗ್ರಾಮದ ಬೆಳಕೋಟಾ ಜಲಾಶಯದಿಂದ ನೀರು ಬಿಟ್ಟಿದ್ದಾರೆ. ನೀರಿನ ರಭಸಕ್ಕೆ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ರೈತರ ಜಮೀನಿಗೆ ನುಗ್ಗಿದ್ದು, ನೂರಾರು ಎಕರೆಯಲ್ಲಿ ಬೆಳೆದಿದ್ದ ತೊಗರಿ, ಹೆಸರು, ಉದ್ದು, ಸೋಯಾ ಸೇರಿ ಮುಂಗಾರು ಬೆಳೆ ಕೊಚ್ಚಿ ಹೋಗಿದೆ. ರೈತರ ಜಮೀನಿನಲ್ಲಿ ಒಂದು ಅಡಿಗೂ ಹೆಚ್ಚು ನೀರು ಶೇಖರಣೆ ಆಗಿ ಬೆಳೆ ಕೊಳೆಯುತ್ತಿದೆ.

ಅಧಿಕಾರಿಗಳ ವಿರುದ್ಧ ರೈತರ ಆರೋಪ :ಸಾಲ ಮಾಡಿಕೊಂಡು ಸಾವಿರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಬೆಳೆ ಕಳೆದುಕೊಂಡು ಅನ್ನದಾತರು ಅಕ್ಷರಶಃ ದಿಕ್ಕೂ ತೋಚದೆ ಕಂಗಾಲಾಗಿದ್ದಾರೆ. ಈ ಎಲ್ಲಾ ಅನಾಹುತಕ್ಕೆ ನೀರಾವರಿ ಇಲಾಖೆ ಅಧಿಕಾರಿಗಳು, ಗುತ್ತಿಗೆದಾರರ ಕಳಪೆ ಕಾಮಗರಿಯಿಂದ ನಿರ್ಮಿಸಿರುವ ಕಾಲುವೆಗಳು ಕಾರಣ. ಕಾಲುವೆ ಒಡೆದು ನೀರು ನುಗ್ಗಿ ಬೆಳೆ ಹಾನಿಯಾಗಿದೆ.

ಒಂದೆಡೆ ಬೆಳೆ ಕೊಚ್ಚಿ ಹೋಗಿದ್ದು, ಮತ್ತೊಂದೆಡೆ ನೀರಿನ ರಭಸಕ್ಕೆ ಫಲವತ್ತಾದ ಮಣ್ಣು ಕೂಡ ಕೊಚ್ಚಿಕೊಂಡು ಹೋಗಿ ಜಮೀನಿನಲ್ಲಿ ಕಲ್ಲು ಬಂಡೆಗಳು ತೇಲಿವೆ. ಇದರಿಂದ ರೈತರು ಮತ್ತೆ ಕೃಷಿ ಮಾಡದಂತಹ ಸ್ಥಿತಿ ನಿರ್ಮಾಣವಾಗಿದೆ‌. ರೈತರ ಅನ್ನಕ್ಕೆ ಮಣ್ಣು ಹಾಕುವ ಕೆಲಸ ಅಧಿಕಾರಿಗಳು ಮಾಡಿದ್ದಾರೆ ಎಂದು ರೈತರು ಕೆಂಡ ಕಾರುತ್ತಿದ್ದಾರೆ.

ಬೆಳೆ ಪರಿಹಾರಕ್ಕೆ ಆಗ್ರಹ :ಇನ್ನು, ಈಗಾಗಲೇ ಒಡೆದಿರುವ ಕಾಲುವೆ ನವೀಕರಣ ಕೆಲಸ ಮಾಡಿ ಇನ್ನು ಮೂರು ತಿಂಗಳು ಕಳೆದಿಲ್ಲ. ಆಗಲೇ ಕಾಲುವೆ ಒಡೆದು ಹೋಗಿವೆ. ಕಳಪೆ ಕಾಮಗಾರಿಯಿಂದಲೇ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಕಳಪೆ ಕಾಮಗಾರಿ ಮಾಡಿ ಹಣ ಹೊಡೆದಿರುವ ನೀರಾವರಿ ಇಲಾಖೆ ಅಧಿಕಾರಿಗಳ, ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಹಾನಿಯಾಗಿರುವ ರೈತರ ಬೆಳೆಗಳಿಗೆ ಸೂಕ್ತ ಪರಿಹಾರ ಕೊಡಬೇಕೆಂದು ರೈತ ಮುಖಂಡರು ಒತ್ತಾಯ ಮಾಡಿದ್ದಾರೆ.

ಓದಿ: ನೆರೆ ಪೀಡಿತ ಜಿಲ್ಲೆಗಳಲ್ಲಿ ಕಟ್ಟೆಚ್ಚರ : ರೋಗಗಳು ಹರಡದಂತೆ ತಡೆಯಲು ಕ್ರಮಕೈಗೊಳ್ಳಲು ಆರೋಗ್ಯ ಸಚಿವರ ಸೂಚನೆ

ABOUT THE AUTHOR

...view details