ಕರ್ನಾಟಕ

karnataka

ETV Bharat / state

ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ... ಕಲಬುರಗಿಯಲ್ಲಿ ಪ್ರತಿಭಟನೆ - ಚಿತ್ತಾಪುರ ತಾಲೂಕಿನ ಬಾಗೋಡಿ ಗ್ರಾಮ

ಡಾ.ಬಿ. ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಡಿದ ಅವಮಾನವನ್ನು ಖಂಡಿಸಿ, ಆರೋಪಿಗಳನ್ನು ಬಂಧಿಸುವಂತೆ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕಲಬುರಗಿಯಲ್ಲಿ ಪ್ರತಿಭಟನೆ
ಕಲಬುರಗಿಯಲ್ಲಿ ಪ್ರತಿಭಟನೆ

By

Published : Dec 16, 2019, 10:32 PM IST

ಕಲಬುರಗಿ: ಚಿತ್ತಾಪುರ ತಾಲೂಕಿನ ಬಾಗೋಡಿ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿರುವುದನ್ನು ಖಂಡಿಸಿ, ಆರೋಪಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದ್ರು.

ದಲಿತ ಸೇನೆ ನೇತೃತ್ವದಲ್ಲಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಗ್ರಾಮಸ್ಥರು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.

ಇನ್ನು, ಈ ವೇಳೆ ಮಾತನಾಡಿದ ದಲಿತ ಸೇನೆ ರಾಜ್ಯಾಧ್ಯಕ್ಷ ಹನಮಂತ ಯಳಸಂಗಿ, ಇತ್ತೀಚಿಗೆ ಜಿಲ್ಲೆಯಲ್ಲಿ ದಲಿತರ ಮೇಲೆ ಶೋಷಣೆಗಳು ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಯು ಆರೋಪಿಗಳ ಬೆನ್ನಿಗೆ ನಿಂತು ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದರು.

ಕೂಡಲೇ ದಲಿತರ ಮೇಲೆ ನಡೆಯುತ್ತಿರುವ ಶೋಷಣೆಗಳನ್ನು ತಡೆಗಟ್ಟಬೇಕು ಹಾಗೂ ಬಾಗೋಡಿ ಗ್ರಾಮದಲ್ಲಿ ನಡೆದ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

ABOUT THE AUTHOR

...view details