ಕಲಬುರಗಿ :ಸಿದ್ದರಾಮಯ್ಯ ಕ್ರಾಸ್ ಬ್ರೀಡ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಲಕ್ಷ್ಮಣ ಸವದಿ, ಸಿದ್ದರಾಮಯ್ಯ ಅವರು ಐದು ವರ್ಷ ಪೂರ್ಣಾವಧಿ ಸಿಎಂ ಆದವರು. ಇಂತಹ ಶಬ್ದ ಬಳಕೆಯಿಂದ ಸಮಾಜದ ಮೇಲೆ ಏನಾಗುತ್ತದೆ ಅನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ಒಂದು ಸಮಾಜವನ್ನು ತುಚ್ಛೀಕರಿಸಲು ಈ ರೀತಿಯ ಹೇಳಿಕೆ ನೀಡಿರೋದು ಸರಿಯಲ್ಲ ಎಂದರು.
ಇದೇ ವೇಳೆ ಸಿಎಂ ಬಿಎಸ್ವೈ ಬದಲಾವಣೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಬದಲಾವಣೆ ಕೇವಲ ಗಾಳಿ ಮಾತು. ಇಲ್ಲದೆ ಇರೋದಕ್ಕೆ ರೆಕ್ಕೆಪುಕ್ಕ ಕಟ್ಟಿ ಕಾಗೆ ಹಾರಿಸಲಾಗುತ್ತಿದೆ. ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ವಿಚಾರದ ಪ್ರಶ್ನೆಯೇ ಇಲ್ಲ ಎಂದರು.
ರೇಣುಕಾಚಾರ್ಯಗೆ ಸವದಿ ಟಾಂಗ್ :ತನ್ನ ಸೋಲಿಗೆ ಯೋಗೇಶ್ವರ್ ಕಾರಣ ಎಂಬ ಹೆಚ್ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸವದಿ, ವಿಶ್ವನಾಥ್ ಅನುಭವಿ ರಾಜಕಾರಣಿ, ಸಾಹಿತಿ. ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಯೋಗೇಶ್ವರ್ಗೆ ಸಚಿವ ಸ್ಥಾನ ನೀಡೋದು ಸಿಎಂ ಮತ್ತು ರಾಷ್ಟ್ರೀಯ ಅಧ್ಯಕ್ಷರಿಗೆ ಬಿಟ್ಟ ವಿಚಾರ.