ಕರ್ನಾಟಕ

karnataka

ETV Bharat / state

ನೀತಿ ಸಂಹಿತೆ ಜಾರಿಯಲ್ಲಿದ್ದು, ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲ: ಸಚಿವ ಸವದಿ - ಸಾರಿಗೆ ಮುಷ್ಕರದ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ

ಇಂದು ಬೆಳಿಗ್ಗೆ ಏಳು ಗಂಟೆಗೆ ನೌಕರರ ಸಂಘದ ಮುಖಂಡರ ಜೊತೆ ಸಭೆ ಕರೆದಿದ್ದೆ. ಆಂತರಿಕವಾಗಿ ಸಭೆ ಮಾಡಿ ನಂತರ ಹೇಳುತ್ತೇವೆ ಎಂದು ಅವರು ಸಭೆಗೆ ಬರಲಿಲ್ಲ. ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಯಾವುದೇ ಭರವಸೆ ಕೊಡಲು ಈ ಸಂದರ್ಭದಲ್ಲಿ ಆಗುವುದಿಲ್ಲ. ಆದ ಕಾರಣ ನಾಳಿನ ಸಾರಿಗೆ ಸಂಸ್ಥೆ ನೌಕರರ ಮುಷ್ಕರ ಹಿಂತೆಗೆದುಕೊಳ್ಳಲು ವಿನಂತಿ ಮಾಡಿದ್ದೇನೆ ಎಂದು ಕಲಬುರಗಿಯ ವಿಮಾನ ನಿಲ್ದಾಣದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

DCM Laxman Savadi statement about KSRTC employees strike
ಡಿಸಿಎಂ ಸವದಿ

By

Published : Apr 6, 2021, 12:20 PM IST

ಕಲಬುರಗಿ:ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲದ ಕಾರಣ ನಾಳಿನ ಸಾರಿಗೆ ಸಂಸ್ಥೆ ನೌಕರರ ಮುಷ್ಕರ ಹಿಂತೆಗೆದುಕೊಳ್ಳಲು ವಿನಂತಿ ಮಾಡಿದ್ದೇನೆ ಎಂದು ಕಲಬುರಗಿಯ ವಿಮಾನ ನಿಲ್ದಾಣದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಡಿಸಿಎಂ ಸವದಿ

ಇಂದು ಬೆಳಿಗ್ಗೆ ಏಳು ಗಂಟೆಗೆ ನೌಕರರ ಸಂಘದ ಮುಖಂಡರ ಜೊತೆ ಸಭೆ ಕರೆದಿದ್ದೆ. ಆಂತರಿಕವಾಗಿ ಸಭೆ ಮಾಡಿ ನಂತರ ಹೇಳುತ್ತೇವೆ ಎಂದು ಅವರು ಸಭೆಗೆ ಬರಲಿಲ್ಲ. ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ ಇದೆ. ಯಾವುದೇ ಭರವಸೆ ಕೊಡಲು ಈ ಸಂದರ್ಭದಲ್ಲಿ ಆಗುವುದಿಲ್ಲ. ಅಲ್ಲದೇ ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಅನುಮತಿ ಕೇಳಿದ್ದೇವೆ. ಆಯೋಗ ಅನುಮತಿ ನೀಡಿದರೆ ಚುನಾವಣಾ ನೌಕರರ ಸಂಘದ ಮುಖಂಡರ ಜೊತೆ ಚರ್ಚಿಸುವೆ. ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈ ಬಿಡುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಅದಾಗ್ಯೂ ಮುಷ್ಕರ ಮುಂದುವರೆಸಿದ್ರೆ ಏನು ಕ್ರಮ ವಹಿಸಬೇಕು ಅದನ್ನು ವಹಿಸುತ್ತೇವೆ ಎಂದು ಸವದಿ ಹೇಳಿದ್ದಾರೆ.

ಇದನ್ನೂ ಓದಿ:ನಾಳೆ ಸಾರಿಗೆ ನೌಕರರ ಮುಷ್ಕರ ಬಹುತೇಕ ಫಿಕ್ಸ್; ಬೇಡಿಕೆ ಈಡೇರಿಸುತ್ತಾ ಸರ್ಕಾರ?

For All Latest Updates

TAGGED:

ABOUT THE AUTHOR

...view details