ಕರ್ನಾಟಕ

karnataka

ETV Bharat / state

ವೆಂಟಿಲೇಟರ್ ಸಿಗದೆ ಅಂಗನವಾಡಿ ಕಾರ್ಯಕರ್ತೆ ಸಾವು - ventilator

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ವೆಂಟಿಲೇಟರ್ ಸಿಗದ ಪರಿಣಾಮ ಮೃತಪಟ್ಟಿದ್ದಾರೆ.

Death of Anganwadi activist
ವೆಂಟಿಲೇಟರ್ ಸಿಗದೆ ಅಂಗನವಾಡಿ ಕಾರ್ಯಕರ್ತೆ ಸಾವು

By

Published : Jul 21, 2020, 3:33 PM IST

ಕಲಬುರಗಿ: ವೆಂಟಿಲೇಟರ್ ಸಿಗದ ಪರಿಣಾಮ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ತಾಲೂಕಿನ ಹೊನ್ನಕಿರಣಗಿ ಗ್ರಾಮದ ನಿವಾಸಿ ಅಂಗನವಾಡಿ ಕಾರ್ಯಕರ್ತೆ ಅಕ್ಕನಾಗಮ್ಮ (50) ಮೃತ ಪಟ್ಟಿದ್ದು, ಲೋ ಬಿಪಿ, ಕೆಮ್ಮು ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಅವರನ್ನು ಜಿಮ್ಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ವೆಂಟಿಲೇಟರ್ ಇಲ್ಲದ ಕಾರಣಕ್ಕೆ ಇ.ಎಸ್.ಐ.ಗೆ ಕರೆದೊಯ್ಯಲಾಗಿದ್ದು, ಅಲ್ಲಿಯೂ ವೆಂಟಿಲೇಟರ್ ಇಲ್ಲವೆಂದು ಸಿಬ್ಬಂದಿ ಹೇಳಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಎರಡು ಆಸ್ಪತ್ರೆಗಳ ನಂತರ ನಗರದ ಹಲವು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ತೀವ್ರ ಉಸಿರಾಟದ ತೊಂದರೆಯಿದ್ದ ಕಾರಣ, ಎಲ್ಲಿಯೂ ದಾಖಲಿಸಿಕೊಂಡಿಲ್ಲ. ರಾತ್ರಿಯೆಲ್ಲ ಅಕ್ಕನಾಗಮ್ಮ ಅವರನ್ನು ಆ್ಯಂಬುಲೆನ್ಸ್​​ನಲ್ಲಿ ಇಟ್ಟು ಸುತ್ತಾಡಿದರೂ ಪ್ರಯೋಜನವಾಗಿಲ್ಲ.

ಯಾವುದೇ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಿಗದೆ, ಕಡೆಗೆ ಇಂದು ನಸುಕಿನ ಜಾವ ಹೈದರಾಬಾದ್​​ಗೆ ಚಿಕಿತ್ಸೆಗೆಂದು ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಸಕಾಲಕ್ಕೆ ಚಿಕಿತ್ಸೆ ನೀಡದೆ ವೈದ್ಯರು ತೋರಿರುವ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದು, ಮಹಿಳೆ ಸಾವನ್ನಪ್ಪಿದ ನಂತರ ಗಂಟಲ ದ್ರವ ತೆಗೆದುಕೊಂಡು ಲ್ಯಾಬ್​​ಗೆ ರವಾನಿಸಲಾಗಿದೆ.

ABOUT THE AUTHOR

...view details