ಕರ್ನಾಟಕ

karnataka

By

Published : Aug 15, 2020, 10:06 AM IST

ETV Bharat / state

ಕಲಬುರಗಿ: ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ

ಕಲಬುರಗಿ ಜಿಲ್ಲಾ ಪಂಚಾಯತಿಯ ಸಾಮಾಜಿಕ ನ್ಯಾಯ, ಅರೋಗ್ಯ ಮತ್ತು ಶಿಕ್ಷಣ ಹಾಗೂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿಗಳ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Kalburgi standing committee
Kalburgi standing committee

ಕಲಬುರಗಿ: ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಮಾಲಾಜಿ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ, ಅರೋಗ್ಯ ಮತ್ತು ಶಿಕ್ಷಣ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಫರತಾಬಾದ್ ಜಿಲ್ಲಾ ಪಂಚಾಯತ್ ಸದಸ್ಯ ದಿಲೀಪ್ ಪಾಟೀಲ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಚಿಂಚೋಳಿ ತಾಲೂಕಿನ ಐನೊಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಗೌತಮ್ ವೈಜನಾಥ್ ಪಾಟೀಲ್ ಹಾಗೂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಳಂದ ತಾಲೂಕಿನ‌ ಮಾದನ ಹಿಪ್ಪರಗಾ ಜಿಲ್ಲಾ ಪಂಚಾಯತ್ ಸದಸ್ಯ ಗುರುಶಾಂತಗೌಡ ಪಾಟೀಲ್ ಆಯ್ಕೆಯಾಗಿದ್ದಾರೆಂದು ಜಿಲ್ಲಾ ಪಂಚಾಯತ್ ಸಿ‌ಇಒ ಡಾ. ಪಿ‌.ರಾಜಾ ಘೋಷಿಸಿದ್ದಾರೆ.

ಆಯ್ಕೆ ಪ್ರಕ್ರಿಯೆಯಲ್ಲಿ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿಗಳ ಸದಸ್ಯರು, ಜಿಪಂ ಮುಖ್ಯ ಯೋಜನಾಧಿಕಾರಿ ಕಿಶೋರ್​ ಕುಮಾರ ದುಬೆ ಉಪಸ್ಥಿತರಿದ್ದರು.

ABOUT THE AUTHOR

...view details