ನಾನು ಪಂಚಮಸಾಲಿ ಮೀಸಲಾತಿ ಪರವಾಗಿರುವೆ: ಮಾಲೀಕಯ್ಯ ಗುತ್ತೇದಾರ್ ಸ್ಪಷ್ಟನೆ - ಪಂಚಮಸಾಲಿ ಸಮಾಜ ಹೋರಾಟ
ಪಂಚಮಸಾಲಿ ಸಮುದಾಯಕ್ಕೆ 2ಎ ನೀಡಲು ನಾನು ವಿರೋಧ ವ್ಯಕ್ತಪಡಿಸಿದ್ದೇನೆ ಎಂದು ಮಾಧ್ಯಮಗಳಲ್ಲಿ ನನ್ನ ಹೇಳಿಕೆ ತಿರುಚಲಾಗಿದೆ. ಇದು ಸತ್ಯಕ್ಕೆ ದೂರವಾದ ಮಾತು, ನಾನು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿರೋಧಿಸಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ತಿಳಿಸಿದ್ದಾರೆ.
ಮಾಲೀಕಯ್ಯ ಗುತ್ತೇದಾರ್ ಸ್ಪಷ್ಟನೆ
ಕಲಬುರಗಿ:ನಾನು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿರೋಧಿ ಅಲ್ಲ, ನಾನು ಮೀಸಲಾತಿ ಪರವಾಗಿರುವೆ ಎಂದು ಮಾಜಿ ಸಚಿವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಸ್ಪಷ್ಟನೆ ನೀಡಿದ್ದಾರೆ.
ಈಡಿಗ ಸಮಾಜ ಕೂಡ ಅತ್ಯಂತ ಹಿಂದುಳಿದ ಸಮಾಜವಾಗಿದೆ. ಈಡಿಗ ಸಮಾಜಕ್ಕೂ ಮೀಸಲಾತಿ ಅವಶ್ಯಕತೆ ಇದೆ. ಪಂಚಮಸಾಲಿ ಹೋರಾಟಕ್ಕೆ ನಾನು ಶುಭ ಹಾರೈಸುತ್ತೇನೆ. ಅವರ ಹೋರಾಟ ಯಶಸ್ವಿಯಾಗಲಿ ಎಂದು ಮಾಲೀಕಯ್ಯ ಗುತ್ತೇದಾರ್ ಹೇಳಿದ್ದಾರೆ.