ಕರ್ನಾಟಕ

karnataka

ETV Bharat / state

ಗೋದಾಮಿಗೆ ಬೆಂಕಿ... ಲಕ್ಷಾಂತರ ಮೌಲ್ಯದ ವಸ್ತುಗಳು ಅಗ್ನಿಗಾಹುತಿ

ಕಲಬುರಗಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಗೋದಾಮಿಗೆ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

By

Published : May 2, 2019, 10:44 PM IST

ಗೋದಾಮಿಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಅಗ್ನಿಗಾಹುತಿ

ಕಲಬುರಗಿ:ಹಣ್ಣು ಶೇಖರಿಸಿಟ್ಟಿದ್ದ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾದ ಘಟನೆ ನಗರದ ಸರ್ದಾರ್​ ವಲ್ಲಭಬಾಯಿ​ ಪಟೇಲ್ ವೃತ್ತದಲ್ಲಿ ನಡೆದಿದೆ.

ಪಟೇಲ್ ವೃತ್ತದಲ್ಲಿರುವ ಶಿಮ್ಲಾ ಫ್ರೂಟ್ಸ್ ಅಂಗಡಿಯ ಮಾಲೀಕ ಮೂಜಿಬ್ ಅಹ್ಮದ್​ ಎಂಬುವರಿಗೆ ಸೇರಿದ ಗೋದಾಮಿನಲ್ಲಿ ಹಣ್ಣು ಹಾಗೂ ಹಣ್ಣು ತುಂಬುವ ಪ್ಲಾಸ್ಟಿಕ್ ಟ್ರೇಗಳನ್ನು ಇಡಲಾಗಿತ್ತು. ಬೆಂಕಿ ಅವಘಡದಲ್ಲಿ ಹಣ್ಣು ಹಾಗೂ ಟ್ರೇಗಳು ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಗೋದಾಮಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ

ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ನೋಡು ನೋಡುತ್ತಿದ್ದಂತೆ ಧಗಧಗಿಸಲು ಆರಂಭಿಸಿತ್ತು. ಗೋದಾಮು ಮಾತ್ರವಲ್ಲ, ಪಕ್ಕದ ಮನೆಗೂ ಬೆಂಕಿ ವಿಸ್ತರಿಸಿಕೊಂಡು ಹೊತ್ತಿ ಉರಿದಿದೆ. ಅದೃಷ್ಟವಶಾತ್​ ಮನೆಯಲ್ಲಿ ಯಾರೂ ವಾಸವಿರದ ಹಿನ್ನಲೆ ಯಾವುದೇ ರೀತಿ ಸಾವು-ನೋವು ಸಂಭವಿಸಿಲ್ಲ.

ಮನೆಯಲ್ಲಿನ ಹಳೆಯ ವಸ್ತುಗಳು, ಪಿಠೋಪಕರಣಗಳು ಸುಟ್ಟು ಭಸ್ಮವಾಗಿವೆ. ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿದ ಪರಿಣಾಮ ಕೆಲಹೊತ್ತು ಆತಂಕ ಮೂಡಿತ್ತು. ಬಳಿಕ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ABOUT THE AUTHOR

...view details